ಬೈಕ್‌ಗೆ ಕ್ಯಾಂಟರ್‌ ಡಿಕ್ಕಿ: ಶಿಕ್ಷಕ ಸಾವು

Published : Nov 13, 2018, 08:35 AM IST
ಬೈಕ್‌ಗೆ ಕ್ಯಾಂಟರ್‌ ಡಿಕ್ಕಿ: ಶಿಕ್ಷಕ ಸಾವು

ಸಾರಾಂಶ

ದಾಸನಪುರದ ನಿವಾಸಿ ರಾಕೇಶ್‌(23) ಮೃತ ದುರ್ದೈವಿ. ಘಟನೆ ಸಂಬಂಧ ಕ್ಯಾಂಟರ್‌ ಚಾಲಕ ಆಸೀಫ್‌ನನ್ನು (25) ಪೀಣ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಬೆಂಗಳೂರು[ನ.13]: ಬೈಕ್‌ಗೆ ಕ್ಯಾಂಟರ್‌ ವಾಹನ ಡಿಕ್ಕಿಯಾಗಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಪೀಣ್ಯದಲ್ಲಿ ಭಾನುವಾರ ರಾತ್ರಿ ನಡೆದಿದೆ.

ದಾಸನಪುರದ ನಿವಾಸಿ ರಾಕೇಶ್‌(23) ಮೃತ ದುರ್ದೈವಿ. ಘಟನೆ ಸಂಬಂಧ ಕ್ಯಾಂಟರ್‌ ಚಾಲಕ ಆಸೀಫ್‌ನನ್ನು (25) ಪೀಣ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ರಾಕೇಶ್‌, ಉಲ್ಲಾಳ ಉಪನಗರದಲ್ಲಿರುವ ವಿದ್ಯಾನಿಕೇತನ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾಕೇಶ್‌ ಕೆಲಸದ ನಿಮಿತ್ತ ಬೈಕ್‌ನಲ್ಲಿ ದಾಸನಪುರದಿಂದ ನಗರಕ್ಕೆ ಬಂದಿದ್ದರು. ರಾತ್ರಿ 9.30ರಲ್ಲಿ ಮನೆಗೆ ವಾಪಸ್‌ ಹಿಂದಿರುಗುತ್ತಿದ್ದರು. ಈ ವೇಳೆ ಪೀಣ್ಯ ಮೇಲ್ಸೇತುವೆ ಬಳಿ ಹಿಂದಿನಿಂದ ಬಂದ ಕ್ಯಾಂಟರ್‌ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!