ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ 510 ಶಾಲಾ ವಾಹನ ತಪಾಸಣೆ: 26 ಪಾನಮತ್ತ ಚಾಲಕರ ವಿರುದ್ಧ ಕೇಸ್‌!

Naveen Kodase   | Kannada Prabha
Published : Jan 24, 2026, 06:51 AM ISTUpdated : Jan 24, 2026, 07:05 AM IST
Bengaluru Traffic

ಸಾರಾಂಶ

ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ಪಾನಮತ್ತರಾಗಿದ್ದ 26 ಖಾಸಗಿ ಶಾಲಾ ವಾಹನ ಚಾಲಕರು ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ 5,458 ಪ್ರಕರಣಗಳನ್ನು ದಾಖಲಿಸಿ, ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು: ನಿಶೆಯಲ್ಲಿದ್ದ ಕೆಲ ಖಾಸಗಿ ಶಾಲಾ ವಾಹನಗಳ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿ ಮತ್ತು ಇಳಿಸಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಪಾನಮತ್ತ ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ಬೆಳಗ್ಗೆ 7 ರಿಂದ 10 ಗಂಟೆವರೆಗೆ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಈ ವೇಳೆ ಒಟ್ಟು 510 ವಾಹನಗಳ ತಪಾಸಣೆ ನಡೆಸಿದ ಪೊಲೀಸರು, ಪಾನಮತ್ತರಾಗಿದ್ದ 26 ಚಾಲಕರ ವಿರುದ್ಧ ಐಎಂವಿ ಕಾಯ್ದೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಈ ಚಾಲಕರ ಚಾಲನಾ ಪರವಾನಿಗೆ ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏಕಮುಖ ಸಂಚಾರ: 

ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ವಾಹನ ಚಲಾಯಿಸಿದವರಿಗೂ ಪೊಲೀಸರು ದಂಡಿಸಿದ್ದಾರೆ. ಈ ಸಂಬಂಧ ಬುಧವಾರ ಮತ್ತು ಗುರುವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಒಟ್ಟು 5,458 ಪ್ರಕರಣಗಳನ್ನು ದಾಖಲಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಸಲಾಗುತ್ತದೆ ಎಂದು ಜಂಟಿ ಆಯುಕ್ತರು (ಸಂಚಾರ) ತಿಳಿಸಿದ್ದಾರೆ.

ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಏಕಮುಖ ರಸ್ತೆಗಳಲ್ಲಿ ವಿರುದ್ಧವಾಗಿ ವಾಹನಗಳನ್ನು ಚಲಾಯಿಸುವ ಚಾಲಕರು ಮತ್ತು ಸವಾರರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಲೋಕಭವನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ

ಬೆಂಗಳೂರು: ಲೋಕ ಭವನಕ್ಕೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಕಿಡಿಗೇಡಿಯೊಬ್ಬ ಹುಸಿ ಬೆದರಿಕೆ ಸಂದೇಶ ಕಳುಹಿಸಿದ್ದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಜ.14 ರಂದು ಲೋಕಭವನದ ಅಧಿಕೃತ ಇ.ಮೇಲ್‌ಗೆ gaina_ramesh@outlook.com ಹೆಸರಿನಿಂದ ಬೆದರಿಕೆ ಮೇಲ್ ಬಂದಿದೆ. ಕೂಡಲೇ ಈ ಬಗ್ಗೆ ಪೊಲೀಸರಿಗೆ ರಾಜ್ಯಪಾಲರ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಕ್ಷಣವೇ ಲೋಕಭವನಕ್ಕೆ ತೆರಳಿ ಬಾಂಬ್ ನಿಷ್ಕ್ರಿಯ ದಳ ಜತೆ ಪೊಲೀಸರು ತಪಾಸಣೆ ನಡೆಸಿದಾಗ ಹುಸಿ ಕರೆ ಎಂಬುದು ಖಚಿತವಾಗಿದೆ.

ಆರ್‌ಡಿಎಕ್ಸ್ ಬಾಂಬ್ ಇಟ್ಟಿದ್ದು ಜ.14 ರಂದು ಮಧ್ಯಾಹ್ನ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿ ಬೆದರಿಸಿದ್ದ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಎಂಕೆ ಸರ್ಕಾರದ ಪತನಕ್ಕೆ ಕ್ಷಣಗಣನೆ, ಚಿನ್ನ ಕಳ್ಳರು ಜೈಲಿಗೆ: ಪ್ರಧಾನಿ ಮೋದಿ ಗುಡುಗು
ಕಾಂಗ್ರೆಸ್ ಸದಸ್ಯರಿಗೆ ಸಾಮಾನ್ಯ ಜ್ಞಾನ ಇಲ್ಲವೇ? ಎನ್.ರವಿಕುಮಾರ್ ಪ್ರಶ್ನೆ