ಬೆಂಗಳೂರು ಸಾವಿನ ನೀರು

Published : Jul 26, 2018, 08:16 AM IST
ಬೆಂಗಳೂರು ಸಾವಿನ ನೀರು

ಸಾರಾಂಶ

ಬೆಂಗಳೂರಿನ ಕೊಳಚೆ ನೀರು ಜೀವಿಗಳ ಪ್ರಾಣಕ್ಕೆ ಸಂಚಕಾರವನ್ನು ತರುತ್ತಿದೆ. ಇಲ್ಲಿಂದ ಕೊಳಚೆ ನೀರು ಹರಿದು ವಿವಿಧ ಜಲಾಶಯಗಳಿಗೆ ಸೇರುವ ಮೂಲಕ ಅಲ್ಲಿ ನೀರನ್ನು ಮಲಿಗೊಳಿಸಿ ವಿವಿಧ ರೀತಿಯ ಮೀನು ಹಾವುಗಳು ಸಾಯುತ್ತಿವೆ. 

ಬೆಂಗಳೂರು : ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸಿ ಕೋಲಾರ ಜಿಲ್ಲೆಯ ಕೆರೆ ತುಂಬಿಸುವ ಕೆ.ಸಿ.ವ್ಯಾಲಿ ಯೋಜನೆಯ ಅಧ್ವಾನದ ಮತ್ತೊಂದು ಮುಖ ಇದೀಗ ಅನಾವರಣಗೊಂಡಿದೆ. ಇತ್ತೀಚೆಗೆ ಕೆ.ಸಿ.ವ್ಯಾಲಿಯಿಂದ ಕೋಲಾರದ ಲಕ್ಷ್ಮೀಸಾಗರ ಕೆರೆಗೆ ಹರಿದ ನೀರಿನಲ್ಲಿ ಬೆಂಗಳೂರಿನ ಬೆಳ್ಳಂದೂರು ಕೆರೆಯ ಮಾದರಿಯಲ್ಲಿ ನೊರೆ ಕಾಣಿಸಿಕೊಂಡು, ತೀವ್ರ ಆತಂಕ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕೆರೆ ಹಾಗೂ ಕಾಲುವೆಯಲ್ಲಿ ನೂರಾರು ಜಲಚರಗಳು ಸತ್ತುಬಿದ್ದಿರುವುದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. 

ಕೆರೆ ಮತ್ತು ಕಾಲುವೆಗಳಲ್ಲಿ ನೂರಾರು ಮೀನುಗಳು ಹಾಗೂ ಹಾವು, ಏಡಿಯಂಥ ಜಲಚರಗಳೂ ಸತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿಷಪೂರಿತ ನೀರು ಹರಿದೇ ಈ ಘಟನೆ ಸಂಭವಿಸಿದೆ ಎಂದು ನೀರಾವರಿ ಹೋರಾಟಗಾರರು, ಗ್ರಾಮಸ್ಥರು ಆರೋಪಿಸಿದ್ದಾರೆ. 

ಬುಧವಾರ ಈ ಕುರಿತು ಪರಿಶೀಲಿಸಿದ ಹೋರಾಟಗಾರರು ಹಾಗೂ ಗ್ರಾಮಸ್ಥರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರಿನಲ್ಲಿ ವಿಷ ಮಿಶ್ರಣವಾಗಿರುವುದೇ ಜಲಚರಗಳು ಸಾಯಲು  ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೆ.ಸಿ.ವ್ಯಾಲಿ ನೀರು ವಿಷಕಾರಿಯಾಗಿದೆ. ಹಾಗಾಗಿ ವೈಜ್ಞಾನಿಕವಾಗಿ, ಸೂಕ್ತವಾಗಿ ಸಂಸ್ಕರಿಸದೆ ಹರಿಸಬಾರದು ಎಂದು ನಾವು ಪ್ರತಿಪಾದಿಸುತ್ತಾ ಬಂದಿದ್ದೆವು. ಆದರೆ, ಸರ್ಕಾರ ನಮ್ಮ ವಾದವನ್ನು ಉಡಾಫೆ ಎಂದು ಭಾವಿಸಿತ್ತು. 

ಅದೃಷ್ಟಕ್ಕೆ ನೀರು ಹರಿಸಿದ ಕೆಲವೇ ದಿನಗಳಲ್ಲಿ ನೊರೆ ಕಾಣಿಸಿಕೊಂಡು ನಮ್ಮ ವಾದ ಸತ್ಯ ಎಂಬುದು ಸಾಬೀತಾಯಿತು’ ಎಂದು ಹೋರಾಟಗಾರರು ಹೇಳಿದ್ದಾರೆ. ‘ಮೇಲ್ನೋಟಕ್ಕೆ ಕಾಲುವೆಯಲ್ಲಿ ನೂರಾರು ಜಲಚರಗಳು ಸತ್ತು ಬಿದ್ದಿರುವುದು ಗೋಚರಿಸುತ್ತಿದೆ. ಕೆರೆಯಲ್ಲಿ ಇನ್ನೆಷ್ಟು ಮೀನುಗಳು ಸತ್ತಿವೆಯೋ ಏನೋ ಎಂದು ನೀರಾವರಿ ಹೋರಾಟಗಾರರು ಮತ್ತು ಲಕ್ಷ್ಮೀಸಾಗರ ಹಾಗೂ ನರಸಾಪುರ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಂದರ್ಬಿಕ ಚಿತ್ರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌