
ದಾವಣಗೆರೆ (ಜೂ. 14): ಮೊದಲ ಪತ್ನಿಗೆ ವಂಚಿಸಿ 2 ನೇ ಮದುವೆಗೆ ಮುಂದಾಗಿದ್ದ ಪತಿ ಮಹಾಶಯನಿಗೆ ಮೊದಲ ಪತ್ನಿ ಶಾಕ್ ನೀಡಿದ್ದಾರೆ.
ಮದುವೆಯಾಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಚೌಲ್ಟ್ರಿಗೆ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ. ರಕ್ಷಣೆ ಕೋರಿ ಮದುಮಗ ಪೊಲೀಸ್ ಮೊರೆ ಹೋಗಿದ್ದಾರೆ. ದಾವಣಗೆರೆಯ ಆರ್ ಎಚ್ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.
ದಾವಣಗೆರೆ ಮೂಲದ ಜಗದೀಶ್ ಮೊದಲ ಪತ್ನಿಯನ್ನು ಬಿಟ್ಟು ಬೇರೆ ಮದುವೆಯಾಗಲು ಮುಂದಾಗಿದ್ದರು. ಜಗದೀಶ್ ಹಾಗೂ ಶ್ರೀದೇವಿ ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಏರ್ಪಟ್ಟಿತ್ತು. ಹೀಗಾಗಿ, ಜಗದೀಶ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ. ಆದರೆ, ವಿಚ್ಛೇದನ ಸಿಗುವುದಕ್ಕಿಂತ ಮುಂಚೆಯೇ ಮತ್ತೊಂದು ಮದುವೆಗೆ ಮುಂದಾಗಿದ್ದಾರೆ.
ಇಂದು ಬೇರೆ ಯುವತಿಯೊಂದಿಗೆ ಮದುವೆ ನಡೆಯಬೇಕಿತ್ತು. ವಿಷಯ ಗೊತ್ತಾಗಿ ಮೊದಲ ಪತ್ನಿ ಶ್ರೀದೇವಿ ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ್ದಾರೆ. ಬಳಿಕ ಜಗದೀಶ್ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.
ನಾನು ಜಗದೀಶ್’ನನ್ನು ಓದಿಸಿದ್ದೇನೆ. ಆತ ತನ್ನನ್ನು ಬಳಸಿಕೊಂಡಿದ್ದಾನೆ. ಕೇಳಿದಾಗ ಹಣ ನೀಡದೇ ಇದ್ದಿದ್ದಕ್ಕೆ ಕೊಲೆ ಯತ್ನವನ್ನು ನಡೆಸಿದ್ದ. ಇಬ್ಬರ ನಡುವೆ ಸಾಮರಸ್ಯವಿಲ್ಲದೇ ವಿಚ್ಛೇದನಕ್ಕೆ ಕೋರಿದ್ದ. ಈಗ ಅದು ಇತ್ಯರ್ಥವಾಗುವ ಮುಂಚೆಯೇ ಬೇರೆ ಮದುವೆಗೆ ಮುಂದಾಗಿದ್ದಾನೆ. ತನಗೆ ನ್ಯಾಯ ಬೇಕು ಎಂದು ಶ್ರೀದೇವಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.