
ಬೆಂಗಳೂರು (ಡಿ.27): ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಸರ್ಕಾರ ನಿಗದಿಪಡಿಸಿದ್ದ ಸಾಂಕೇತಿಕ ಬೆಲೆಯನ್ನು ಬಡಜನರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಶುಲ್ಕವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗಾಗಲೇ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ರ ಕಲಂ 94-ಸಿ ಮತ್ತು 94-ಸಿಸಿ ಅನ್ವಯ ರೂಪಿಸಲಾಗಿದ್ದ ಸಾಂಕೇತಿಕ ಬೆಲೆಗಳನ್ನು ತಗ್ಗಿಸಲು ಸಂಪುಟ ನಿರ್ಧರಿಸಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ 30-40 ಚದರ ಅಡಿಗೆ ರೂ.1000, 40-60 ಚದರ ಅಡಿಗೆ 2000 ಹಾಗೂ 50-80 ಚದರ ಅಡಿಯ ನಿವೇಶನಗಳಿಗೆ ರೂ. 3000 ಗಳಿಗೆ ಪರಿಷ್ಕರಿಸಲು ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಈ ಮೊದಲು ಕ್ರಮವಾಗಿ ರೂ. 2, 4 ಹಾಗೂ ರೂ.8000 ವನ್ನು ವಿಧಿಸಲಾಗುತ್ತಿತ್ತು. ನಗರ ಪ್ರದೇಶಗಳಲ್ಲಿ (ಬಿಬಿಎಂಪಿ ಹೊರತುಪಡಿಸಿ) 20-30 ಚದರ ಅಡಿಗೆ 5 ಸಾವಿರ ರೂಗಳಿಗೆ ಪರಿಷ್ಕರಿಸಿದ್ದು, ಪರಿಶಿಷ್ಟರು ಹಾಗೂ ಅಂಗವಿಕಲರಿಗೆ 2 ಸಾವಿರಗಳಿಗೆ ಇಳಿಸಲಾಗಿದೆ. ಈ ಮೊದಲು ರೂ. 10 ಸಾವಿರ ನಿಗದಿಪಡಿಸಲಾಗಿತ್ತು ಎಂದು ವಿವರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.