
ನವದೆಹಲಿ(ಸೆ.10): ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಯಾವ ಕಾರಣದಿಂದ ಆಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ ಬಂದ್ ವಿಫಲಗೊಂಡಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಅಂತರಾಷ್ಟ್ರೀಯ ವಾಣಿಜ್ಯ ಬಿಕ್ಕಟ್ಟಿನಿಂದ ತೈಲ ಬೆಲೆ ಏರಿಕೆ ಕಂಡಿದ್ದು, ಈ ಸಂಕಷ್ಟ ತಾತ್ಕಾಲವಷ್ಟೇ ಎಂದು ಭರವಸೆ ನೀಡಿದರು. ಇದನ್ನು ದೇಶದ ಜನತೆ ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಗೆ ಇದರ ಅರಿವಿಲ್ಲ ಎಂದು ರವಿಶಂಕರ್ ವ್ಯಂಗ್ಯವಾಡಿದ್ದಾರೆ.
ಭಾರತ ಸರ್ಕಾರದ ನಿಯಂತ್ರಣ ಸಾಮಾನ್ಯ ಭಾರತೀಯನ ಬಳಿಯಿದೆ ಎಂದಿರುವ ರವಿಶಂಕರ್, ಕೇಂದ್ರ ಸರ್ಕಾರ ತಮ್ಮ ಜೊತೆಗೆ ಇದೆ ಎಂಬುದು ಜನತೆಗೆ ಗೊತ್ತಿದೆ ಎಂದು ರವಿಶಂಕರ್ ಅಭಿಪ್ರಾಯಟ್ಟಿದ್ದಾರೆ.
ತೈಲದರ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಹಾಗೆಂದು ಬೆಲೆ ಏರಿಕೆಯನ್ನು ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ಬೆಲೆ ಏರಿಕೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರವಿಶಂಕರ್ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.