
ಮಂಗಳೂರು : ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕರೆ ನೀಡಿದ್ದ ಎರಡು ದಿನಗಳ ಬಂದ್ಗೆ ಮೊದಲ ದಿನ ಮಂಗಳವಾರ ರಾಜ್ಯದಲ್ಲಿ ಮಿಶ್ರ ‘ಅರ್ಧಂಬರ್ಧ ಪ್ರತಿಕ್ರಿಯೆ’ ವ್ಯಕ್ತವಾಗಿದೆ.
ಮಂಗಳವಾರ ಬಳ್ಳಾರಿ ಹಾಗೂ ಕೋಲಾರದಲ್ಲಿ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು ಇದನ್ನು ಹೊರತು ಪಡಿಸಿದರೆ ಬಹುತೇಕ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಪರಿಣಾಮ ಬೀರಿಲ್ಲ.
ಇನ್ನು ಇತ್ತ ಭಾರತ್ ಬಂದ್ ವೇಳೆ ಹಸಿವು ತಾಳಲಾರದೆ ಇಬ್ಬರು ಅಲೆಮಾರಿ ಪುಟಾಣಿಗಳು ಅಂಗಲಾಚುವ ದೃಶ್ಯ ಮಂಗಳೂರು ಸಿಟಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಕಂಡುಬಂತು.
ಶಿವಪ್ರಸಾದ್ ಬಳ್ಳಾರಿ ಎಂಬ ಪೊಲೀಸ್ ಪೇದೆಯೊಬ್ಬರು ಪುಟಾಣಿಗಳಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.