ಭಾರತ್ ಬಂದ್ : ಮುಂದೂಡಿಕೆಯಾಗುತ್ತಾ ವಿವಿ ಪರೀಕ್ಷೆ..?

Published : Jan 07, 2019, 02:40 PM ISTUpdated : Jan 07, 2019, 09:25 PM IST
ಭಾರತ್ ಬಂದ್ : ಮುಂದೂಡಿಕೆಯಾಗುತ್ತಾ ವಿವಿ ಪರೀಕ್ಷೆ..?

ಸಾರಾಂಶ

ಜನವರಿ 8 ಹಾಗೂ 9 ರಂದು ಭಾರತ್ ಬಂದ್ ಆಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯದ ವಿವಿಧ ವಿವಿಗಳ ಪರೀಕ್ಷೆಗಳು ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಇನ್ನು ಕುವೆಂಪು ವಿವಿ ಬಿಎಡ್ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಿಕೆಯಾಗಿದೆ.

ಬೆಂಗಳೂರು : ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಬಂದ್ ಕರೆ ನೀಡಿದೆ. ಜನವರಿ 8 ಹಾಗೂ 9 ರಂದು ಎರಡು ದಿನಗಳ ಕಾಲ ಬಂದ್ ನಡೆಯಲಿದ್ದು, ಈ ನಿಟ್ಟಿನಲ್ಲಿ ಹಲವು ಸೇವೆಗಳು ವ್ಯತ್ಯಯವಾಗಲಿದೆ.   

ನಾಳೆ ಭಾರತ್ ಬಂದ್ ಹಿನ್ನೆಲೆ ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆಯಾಗುವ ಸಾಧ್ಯತೆ ಇದೆ.  ಎಲ್.ಎಲ್.ಬಿ ಹಾಗೂ ಸಿವಿಲ್ ಇಂಜಿನಿಯರಿಂಗ್ ಪರೀಕ್ಷೆಗಳು ಮುಂದೂಡಿಕೆಯಾಗುವ ಸಾಧ್ಯತೆ ಇದೆ.  ಆದರೆ ಈ ಬಗ್ಗೆ ಇನ್ನೂ ಕೂಡ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಸೋಮವಾರ ಸಂಜೆ ವೇಳೆ ವಿವಿ ತನ್ನ ಅಂತಿಮ ನಿರ್ಧಾರ ಪ್ರಕಟ ಮಾಡಲಿದೆ.

ಜನವರಿ 8 - 9 ರಂದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ವಿಟಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ :  ಎರಡು ದಿನಗಳ ಕಾಲ ರಾಷ್ಟ್ರಾದ್ಯಂತ ಬಂದ್ ಹಿನ್ನೆಲೆ ವಿಟಿಯುನಲ್ಲಿ ನಡೀಬೇಕಿದ್ದ ಪರೀಕ್ಷೆಗಳೂ ಕೂಡ  ಮುಂದೂಡಿಕೆಯಾಗುವ ಸಾಧ್ಯತೆ ಇದೆ.  

ಈ ಬಗ್ಗೆಯೂ ವಿಟಿಯೂ ಕೂಡ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಬಂದ್ ನಿಂದ ಹಲವು ಸೇವೆಗಳು ವ್ಯತ್ಯವಾಗಲಿದ್ದು, ಅನಾನುಕೂಲತೆಯಾಗುವುದರಿಂದ ಮುಂಜಾಗೃತಾ ಕ್ರಮವಾಗಿ ಪರೀಕ್ಷೆ ಮುಂದೂಡುವ ಸಾಧ್ಯತೆ ಹೆಚ್ಚಿದೆ ಎಂದು  ವಿಟಿಯು ಕುಲಪತಿ ಕರಿಸಿದ್ದಪ್ಪ ಸುವರ್ಣ ನ್ಯೂಸ್.ಕಾಂ ಗೆ ಮಾಹಿತಿ ನೀಡಿದ್ದಾರೆ. 

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ :  ಭಾರತ್ ಬಂದ್ ಹಿನ್ನೆಲೆ ಜನವರಿ 8 ಹಾಗೂ 9 ರಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಬಿಎಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದೂಡಿಕೆಯಾದ ಪರೀಕ್ಷೆಗಳು ಇದೇ ತಿಂಗಳ 20 ಮತ್ತು 21 ಕ್ಕೆ ನಡೆಯಲಿವೆ ಎಂದು ಕುವೆಂಪು ವಿವಿ ಕುಲ ಸಚಿವ ಪ್ರೋ ಜೋಗನ್ ಶಂಕರ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ರಾಜ್ಯದ ಗಡಿ ಆನೇಕಲ್‌ನಲ್ಲಿ ದರ್ಶನ್ 'ಡೆವಿಲ್‌'ಗೆ ಹೀಗೆಲ್ಲಾ ಆಗ್ತಿದ್ಯಾ?