ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ: ಆಶಯವಿನ್ನೂ ಜೀವಂತ

Published : Jan 28, 2019, 07:12 PM IST
ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ: ಆಶಯವಿನ್ನೂ ಜೀವಂತ

ಸಾರಾಂಶ

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕು ಎಂಬುವುದು ಎಲ್ಲರ ಆಶಯ. ಅವರು ಶಿವೈಕ್ಯರಾದ ಈ ಸಂದರ್ಭದಲ್ಲಾದರೂ ಭಾರತದ ಅತ್ಯುನ್ನತ ಗೌರವ ಸಿಗಲಿದೆ ಎಂಬ ಭರವಸೆ ಕನ್ನಡಿಗರಿಗೆ ಇತ್ತು. ಆದರೆ, ಅದೀಗ ಈಡೇರಲಿಲ್ಲ. ಹೋಗಲಿ, ಅವರು ಹುಟ್ಟು ಹಬ್ಬಕ್ಕಾದರೂ ನೀಡಲಿ ಎಂಬುವುದು ಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು ಅವರ ಆಶಯ.

ಬೆಂಗಳೂರು: 111 ವರ್ಷದ ತ್ರಿವಿಧ ದಾಸೋಹಿ, ಆಧುನಿಕ ಬಸವಣ್ಣ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾಗಿದ್ದಾರೆ. ವಿವಿಧ ರೂಪಗಳಲ್ಲಿ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿರುವ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂಬ ಆಗ್ರಹ ಎಲ್ಲೆಡೆಯಿಂದ ಕೇಳಿ ಬಂದಿತ್ತು.

ಆದರೆ, ಈ ವರ್ಷವೂ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಿಗಲಿಲ್ಲ. ಈ ಬಗ್ಗೆ ವಿವಿಧೆಡೆಯಿಂದ ಪರ, ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಗೌರವ ತಪ್ಪಿದ್ದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಕೆಸರೆರಚಾಟವೂ ಮುಂದುವರಿದಿದೆ. 

ಈ ಎಲ್ಲ ಆರೋಪ, ಪ್ರತ್ಯಾರೋಪಗಳ ನಡುವೆಯೇ ಶ್ರೀಗಳಿಗೆ ಭಾರತ ರತ್ನ ನೀಡುವ ಸಂಬಂಧ ಚಿತ್ರ ನಿರ್ದೇಶಕ ಬಿ.ಎಸ್. ಲಿಂಗದೇವರು ಹೊಸದೊಂದು ಆಶಯವನ್ನು ವ್ಯಕ್ತಪಡಿಸಿದ್ದಾರೆ.

'ಒಂದು ಸಮಿತಿಯಿಂದ ಪ್ರಶಸ್ತಿಗೆ ಅರ್ಹರನ್ನ ಆಯ್ಕೆ ಮಾಡಿದ ನಂತರ ಸರ್ಕಾರ ಆ ಪ್ರಶಸ್ತಿ ಘೋಷಿಸುವುದು ಪರಂಪರೆ.  ನಂತರ ಆ ಪ್ರಶಸ್ತಿ ಪಡೆದವರ ಬಗ್ಗೆ ಮತ್ತು ಪ್ರಕ್ರಿಯೆ ಬಗ್ಗೆ ಮಾತನಾಡುವುದು ಚರ್ಚೆಗೆ ಯೋಗ್ಯವಲ್ಲದ ಮಾತು. ಈ ಹಿನ್ನಲೆಯಲ್ಲಿ ಭಾರತ ರತ್ನ ಪ್ರಶಸ್ತಿ ಪಡೆದವರ ಹೋಲಿಕೆಗೆ ಮೀರಿದ ವ್ಯಕ್ತಿತ್ವ ನಮ್ಮ ಶ್ರೀಗಳು. 

ಏಪ್ರಿಲ್ ಒಂದನೇ ತಾರೀಖು ಶ್ರೀಗಳ ಹುಟ್ಟು ಹಬ್ಬದ ಪ್ರಯುಕ್ತ  ಅವರ ನೆನಪಲ್ಲಿ ಭಾರತ ರತ್ನ ಪ್ರಶಸ್ತಿ ನೀಡಲಿ ಎಂದು ಒತ್ತಾಯಿಸೋಣ. ಆಗ ಮಾತ್ರ ಈಗ ಆಗಿರುವ ಅನಾಹುತ ತಪ್ಪಿಸಲು ಸಾಧ್ಯ,' ಎಂದು ಕರ್ನಾಟಕದ ರತ್ನರಿಗೆ ಭಾರತ ರತ್ನ ನೀಡಲು ಲಿಂಗದೇವರು ಅವರು ಆಗ್ರಹಿಸಿದ್ದಾರೆ.

ಕೇಂದ್ರ ಸರಕಾರ ಈ ಮನವಿಯನ್ನು ಪುರಸ್ಕರಿಸಿ, ಕನ್ನಡಿಗರ ಆಶಯವನ್ನು ಈಡೇರಿಸುತ್ತಾ ಎಂಬುದನ್ನು ಕಾದು ನೋಡಬೇಕು.

ಭಾರತ ರತ್ನ ಯಕ್ಕಡಕ್ಕೆ ಸಮ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ
ಕಾಂಗ್ರೆಸ್ ರ‍್ಯಾಲಿಯಲ್ಲಿ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ, ಈ ಭಾರಿಯ ಭರವಸೆ ಏನು?