ಜೈಲಲ್ಲಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳಿಗೆ ಥಳಿತ

Published : Sep 12, 2017, 07:36 PM ISTUpdated : Apr 11, 2018, 12:37 PM IST
ಜೈಲಲ್ಲಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳಿಗೆ ಥಳಿತ

ಸಾರಾಂಶ

ಉಡುಪಿ ಮೂಲದ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಸಹ ಕೈದಿಗಳು ಸೋಮವಾರ ಹಲ್ಲೆ ನಡೆಸಿದ್ದಾರೆ.

ಮಂಗಳೂರು: ಉಡುಪಿ ಮೂಲದ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಸಹ ಕೈದಿಗಳು ಸೋಮವಾರ ಹಲ್ಲೆ ನಡೆಸಿದ್ದಾರೆ.

ಭಾಸ್ಕರ ಶೆಟ್ಟಿ ಅವರ ಪುತ್ರ, ಆರೋಪಿ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಮೇಲೆ ಬಜಿಲಕೇರಿ ಧನರಾಜ್ ನೇತೃತ್ವದ ತಂಡ ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ನಿರಂಜನ್ ಭಟ್ ಮತ್ತು ನವನೀತ್ ಶೆಟ್ಟಿಯನ್ನು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು 2006ರ ಜುಲೈನಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಮತ್ತು ಜ್ಯೋತಿಷಿ ನಿರಂಜನ ಭಟ್ ಸೇರಿ ಕೊಲೆ ಮಾಡಿ

ಬಳಿಕ ಹೋಮಕುಂಡದಲ್ಲಿ ಅವರ ಶವವನ್ನು ದಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹುಟ್ಟಿದ ಮಗು ನೋಡಲು ಬರಲೇ ಇಲ್ಲ ಅಪ್ಪ: ಹೆರಿಗೆ ರಜೆಯಲ್ಲಿ ಬಂದಿದ್ದ ಸೈನಿಕ ಅಪಘಾತಕ್ಕೆ ಬಲಿ!
ನಕಲಿ ದಾಖಲೆ ಸೃಷ್ಟಿ, ಮಾನವ ಕಳ್ಳಸಾಗಣೆ ಆರೋಪ, ಬಾಂಗ್ಲಾ ಪ್ರಜೆಗೆ ಬೇಲ್‌ ನಿರಾಕರಿಸಿದ ಹೈಕೋರ್ಟ್