ಭೀಮ್ ಆ್ಯಪ್ ಕ್ರೆಡಿಟ್ ಅನ್ನು ಅಂಬೇಡ್ಕರ್'ಗೆ ಅರ್ಪಿಸಿದ ಪ್ರಧಾನಿ ಮೋದಿ

Published : Apr 14, 2017, 04:58 AM ISTUpdated : Apr 11, 2018, 12:39 PM IST
ಭೀಮ್ ಆ್ಯಪ್ ಕ್ರೆಡಿಟ್ ಅನ್ನು ಅಂಬೇಡ್ಕರ್'ಗೆ ಅರ್ಪಿಸಿದ ಪ್ರಧಾನಿ ಮೋದಿ

ಸಾರಾಂಶ

ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ನಾಗ್ಪುರದಲ್ಲಿ ಅಂಬೇಡ್ಕರ್ ಗೆ ಗೌರವ ನಮನ ಸಲ್ಲಿಸಿ, ‘ಭಿಮ್’ ಆ್ಯಪ್ ನ ಕ್ರೆಡಿಟ್ಟನ್ನು ಅವರಿಗೆ ಅರ್ಪಿಸಿ, ಅಂಬೇಡ್ಕರ್ ಕನಸನ್ನು ನನಸು ಮಾಡುವುದಾಗಿ ಹೇಳಿದರು. 

ನವದೆಹಲಿ (ಏ.14): ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ನಾಗ್ಪುರದಲ್ಲಿ ಅಂಬೇಡ್ಕರ್ ಗೆ ಗೌರವ ನಮನ ಸಲ್ಲಿಸಿ, ‘ಭಿಮ್’ ಆ್ಯಪ್ ನ ಕ್ರೆಡಿಟ್ಟನ್ನು ಅವರಿಗೆ ಅರ್ಪಿಸಿ ಅಂಬೇಡ್ಕರ್ ಕನಸನ್ನು ನನಸು ಮಾಡುವುದಾಗಿ ಹೇಳಿದರು. 

ನಾಗ್ಪುರದಲ್ಲಿ ಜರುಗಿದ ಡಿಜಿ ಧನ್ ಮೇಳದಲ್ಲಿ ಮೋದಿ ಭಾಷಣ ಮಾಡುತ್ತಾ, ಬಡವರು ‘ಡಿಜಿ ಧನ್’ ಅನ್ನು ‘ನಿಜಿ ಧನ್’ ಎಂದು ಹೇಳುವ ದಿನ ಹೆಚ್ಚು ದೂರವಿಲ್ಲ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಸ್ವತಂತ್ರ ಸಂಗ್ರಾಮ ವೇಳೆ ಜನರ ತ್ಯಾಗವನ್ನು ಸ್ಮರಿಸುತ್ತಾ, ಲಕ್ಷಾಂತರ ಜನರ ತ್ಯಾಗ, ಬಲಿದಾನದ ಫಲವಾಗಿ ಭಾರತಕ್ಕೆ ಸ್ವತಂತ್ರ ಸಿಕ್ಕಿದೆ ಎಂದಿದ್ದಾರೆ.

ಭಿಮ್ ಆ್ಯಪ್ ಬಗ್ಗೆ ಒತ್ತು ನೀಡುತ್ತಾ, ದೇಶದಾದ್ಯಂತ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಡಿಜಿಧನ್ ಚಳುವಳಿಯನ್ನು ಸಫಾಯಿ ಅಭಿಯಾನ್ ಎಂದಿದ್ದು, ಭ್ರಷ್ಟಾಚಾರದ ವಿರುದ್ಧ ಹೋರಾಡುವುದೇ ಇದರ ಗುರಿ ಎಂದಿದ್ದಾರೆ.

ಬಳಿಕ ನಾಗ್ಪುರದಲ್ಲಿರುವ ಕೊರಡಿ ಥರ್ಮಲ್ ವಿದ್ಯುತ್ ಸ್ಥಾವರವನ್ನು ಉದ್ಘಾಟಿಸಿ, ನವೀಕರಿಸಬಹುದಾದ ಇಂಧನ ವಲಯದ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು
ಪಾಕ್‌ ಜಿಂದಾಬಾದ್‌ ಕೇಸ್‌: ಸಿಟಿ ರವಿ ಪ್ರಶ್ನೆಗೆ ಗೃಹಸಚಿವ ಸ್ಫೋಟಕ ಮಾಹಿತಿ