'ದಲಿತರನ್ನು ಸಮಾಜದ ಕೆಳಸ್ತರದಲ್ಲಿಡುವುದೇ ಆರೆಸ್ಸೆಸ್, ಬಿಜೆಪಿ ಉದ್ದೇಶ'

Published : Jan 02, 2018, 09:32 PM ISTUpdated : Apr 11, 2018, 12:40 PM IST
'ದಲಿತರನ್ನು ಸಮಾಜದ ಕೆಳಸ್ತರದಲ್ಲಿಡುವುದೇ ಆರೆಸ್ಸೆಸ್, ಬಿಜೆಪಿ ಉದ್ದೇಶ'

ಸಾರಾಂಶ

ಪುಣೆಯ ಭೀಮಾ ಕೋರೆಗಾಂವ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ದಲಿತ ಪ್ರತಿರೋಧದ ಸಂಕೇತ ಪುಣೆಯ ಭೀಮಾ ಕೋರೆಗಾಂವ್​ನಲ್ಲಿ ಜಾತಿ ಹಿಂಸಾಚಾರದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ

ನವದೆಹಲಿ: ಪುಣೆಯ ಭೀಮಾ ಕೋರೆಗಾಂವ್​ನಲ್ಲಿ ನಡೆದ ಜಾತಿ ಹಿಂಸಾಚಾರ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೆಸ್ಸೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪುಣೆಯ ಭೀಮಾ ಕೋರೆಗಾಂವ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ದಲಿತ ಪ್ರತಿರೋಧದ ಸಂಕೇತವಾಗಿದೆಯೆಂದು ಅವರು ಟ್ವೀಟಿಸಿದ್ದಾರೆ.

ದಲಿತರನ್ನು ಭಾರತೀಯ ಸಮಾಜದ ಕೆಳಸ್ತರದಲ್ಲಿಡುವುದೇ ಆರೆಸ್ಸೆಸ್ ಹಾಗೂ ಬಿಜೆಪಿಯ ಮುಖ್ಯ ಉದ್ದೇಶ. ಉನಾ, ರೋಹಿತ್ ವೆಮುಲಾ, ಈಗ ಭೀಮಾ ಕೋರೆಗಾಂವ್ ದಲಿತ ಪ್ರತಿರೋಧದ ಸಂಕೆತವಾಗಿದೆಯೆಂದು ಹೇಳಿದ್ದಾರೆ.

ಪುಣೆಯ ಭೀಮಾ ಕೋರೆಗಾಂವ್​ನಲ್ಲಿ ಜಾತಿ ಹಿಂಸಾಚಾರದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.  ಕಿಡಿಗೇಡಿಗಳ ಕಲ್ಲುತೂರಾಟದಲ್ಲಿ ಓರ್ವ ಬಲಿಯಾಗಿದ್ದಾನೆ.

ಭೀಮಾ ಕೋರೆಗಾಂವ್‌ ಯುದ್ಧದಲ್ಲಿ ದಲಿತರನ್ನು ಒಳಗೊಂಡ ಬ್ರಿಟಿಷ್‌ ಸೇನೆಯು ಮೇಲ್ಜಾತಿಯವರನ್ನು ಒಳಗೊಂಡ ಪೇಶ್ವೆ ಸೇನೆಯನ್ನು ಸೋಲಿಸಿದ್ದ ಸ್ಮರಣಾರ್ಥ ವಿಜಯೋತ್ಸವ ಆಯೋಜಿಸಲಾಗಿತ್ತು.  ಈ ವೇಳೆ ಬಲಪಂಥೀಯ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಮಾತಿನ ಚಕಮಕಿ ತಾರಕಕ್ಕೇರಿ ಕಲ್ಲು ತೂರಾಟ ನಡೆದಿದೆ. ಬೆಂಕಿ ಹಚ್ಚಿ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಮನೆ, ವಾಹನಗಳನ್ನು ಧ್ವಂಸ ಮಾಡಿದ್ದಾರೆ. 144 ಸೆಕ್ಷನ್​ ಜಾರಿಯಿದ್ದರೂ ಇಂದೂ ಕೂಡಾ ಪ್ರತಿಭಟನೆ ಮುಂದುವರೆದಿದೆ.

1 ಜನವರಿ 1818ರಂದು ಭೀಮಾ ಕೋರೆಗಾಂವ್ ನಡೆದ ಕದನವು ಮೇಲ್ಜಾತಿಯವರ ವಿರುದ್ಧ ದಲಿತ-ಶೋಷಿತರ ವಿಜಯವಾಗಿತ್ತು ಎಂದು ದಲಿತ ಮುಖಂಡ ಹಾಗೂ ಚಿಂತಕರು ಅಭಿಪ್ರಾಯಪಡುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!