ಸುಷ್ಮಾ ಗೌರವಾರ್ಥ ದೇಗುಲದಲ್ಲಿ ಸಾವಿರ ದೀಪ ಬೆಳಗಿಸಿದ ಭೂತಾನ್ ದೊರೆ!

Published : Aug 10, 2019, 10:10 PM IST
ಸುಷ್ಮಾ ಗೌರವಾರ್ಥ ದೇಗುಲದಲ್ಲಿ ಸಾವಿರ ದೀಪ ಬೆಳಗಿಸಿದ ಭೂತಾನ್ ದೊರೆ!

ಸಾರಾಂಶ

ಇತ್ತೀಚಿಗೆ ನಿಧನರಾದ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್| ಸುಷ್ಮಾ ಸ್ಮರಣಾರ್ಥ ದೇಗುಲದಲ್ಲಿ ಸಾವಿರ ದೀಪ ಬೆಳಗಿಸಿದ ಭೂತಾನ್ ದೊರೆ| ಭೂತಾನ್ ರಾಜಧಾನಿ ಥಿಂಪುವಿನ ಸಿಂತೋಖಾ ಜೋಂಗ್ ದೇವಾಲಯದಲ್ಲಿ ವಿಶೇಷ ಪೂಜೆ| ಭೂತಾನ್ ದೊರೆ ಜಿಗ್ಮೆ ಕೇಸರ್ ನಾಮ್ಗೇಲ್ ವಾಂಗ್‌ಚುಕ್’ರಿಂದ ವಿಶೇಷ ಪೂಜೆ| ಭಾರತ ಮತ್ತು ಭೂತಾನ್ ನಡುವಿನ ಸೌಹಾರ್ದ ಸಂಭಂಧಕ್ಕೆ ಸಾಕ್ಷಿ| 

ಥಿಂಪು(ಆ.10): ಇತ್ತೀಚಿಗೆ ನಿಧನರಾದ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಸ್ಮರಣಾರ್ಥ ಭೂತಾನ್ ದೊರೆ ಸ್ಥಳೀಯ ದೇಗುಲದಲ್ಲಿ ಒಂದು ಸಾವಿರ ದೀಪ ಬೆಳಗಿಸಿ ಗೌರವ ಸಲ್ಲಿಸಿದ್ದಾರೆ.

ಸುಷ್ಮಾ ಆತ್ಮಕ್ಕೆ ಶಾಂತಿ ಕೋರಿ ಭೂತಾನ್ ದೊರೆ ಜಿಗ್ಮೆ ಕೇಸರ್ ನಾಮ್ಗೇಲ್ ವಾಂಗ್‌ಚುಕ್, ರಾಜಧಾನಿ ಥಿಂಪುವಿನ ಸಿಂತೋಖಾ ಜೋಂಗ್ ದೇವಾಲಯದಲ್ಲಿ ಸಾವಿರ ದೀಪ ಬೆಳಗಿಸಿ ಗೌರವ ಸೂಚಿಸಿದರು.

ಈ ಕುರಿತಂತೆ ಭೂತಾನ್ ರೇಡಿಯೋ ಕೂಡ ವರದಿ ಮಾಡಿದ್ದು, ದೊರೆಯ ಈ ಕಾರ್ಯ ಭಾರತ ಮತ್ತು ಭೂತಾನ್ ದೇಶಗಳ ನಡುವಿನ ಸೌಹಾರ್ದ ಮತ್ತು ಆತ್ಮೀಯ ಸಂಬಂಧವನ್ನು ಬಿಂಬಿಸುತ್ತದೆ ಎಂದು ಹೇಳಿದೆ.

ಸುಷ್ಮಾ ವಿದೇಶಾಂಗ ಸಚಿವರಾಗಿದ್ದ ವೇಳೆ ಭೂತಾನ್ ದೊರೆ ವಾಂಗ್‌ಚುಕ್ ಪತ್ನಿ ಮತ್ತು ಮಗು ಸಮೇತ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುಷ್ಮಾ ಭೂತಾನ್ ದೊರೆ ಮತ್ತು ಕಟುಂಬಕ್ಕೆ ಆತ್ಮೀಯ ಆತಿಥ್ಯ ನೀಡಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ