ಕೇಂದ್ರದ ಭರವಸೆಗಳನ್ನು ಆದಿತ್ಯನಾಥ್ ಈಡೇರಿಸುವರೇ? ಕಾಂಗ್ರೆಸ್ ಸವಾಲು

By Suvarna Web DeskFirst Published Mar 18, 2017, 4:08 PM IST
Highlights

ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಸವಾಲು ನೂತನ ಸಿಎಂ ಯೋಗಿ ಆದಿತ್ಯನಾಥ್ ಸಿಂಗ್ ಮೇಲಿದೆ ಎಂದು ಕಾಂಗ್ರೆಸ್ ಹೇಳಿದೆ.

ನವದೆಹಲಿ (ಮಾ.18): ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಸವಾಲು ನೂತನ ಸಿಎಂ ಯೋಗಿ ಆದಿತ್ಯನಾಥ್ ಸಿಂಗ್ ಮೇಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ತರುತ್ತೇವೆ. ರಾಜ್ಯವನ್ನು ಅಭಿವೃದ್ಧಿಪಡಿಸುತ್ತೇವೆ. ಜನರಿಗೆ ತಾರತಮ್ಯ ಮಾಡುವುದಿಲ್ಲವೆಂದು ಪ್ರಧಾನಿಯವರು ಚುನಾವಣಾ ಸಂದರ್ಭದಲ್ಲಿ ಜನರಿಗೆ ಭರವಸೆ ನೀಡಿದ್ದರು. ಆದರೆ ಇದನ್ನು ಪೂರೈಸುವ ಬಗ್ಗೆ ಅನುಮಾನವಿದೆ. ಈ ಅನುಮಾನವನ್ನು ಹೋಗಲಾಡಿಸಿ ಸರ್ಕಾರದ ಬದ್ಧತೆಗಳನ್ನು ಪೂರೈಸುವ ಸವಾಲು ಆದಿತ್ಯನಾಥ್ ಸಿಂಗ್ ಎದುರಿಗಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.  

click me!