ಎಫ್'ಐಆರ್'ಗೆ ಹೈಕೋರ್ಟ್ ತಡೆ; ಆರ್ ಅಶೋಕ್'ಗೆ ಬಿಗ್ ರಿಲೀಫ್

Published : Jan 25, 2018, 02:13 PM ISTUpdated : Apr 11, 2018, 12:39 PM IST
ಎಫ್'ಐಆರ್'ಗೆ ಹೈಕೋರ್ಟ್ ತಡೆ; ಆರ್ ಅಶೋಕ್'ಗೆ ಬಿಗ್ ರಿಲೀಫ್

ಸಾರಾಂಶ

ಬಗರ್ ಹುಕುಂ ಸಾಗುವಳಿ ಸಮಿತಿಯಿಂದ ಅಕ್ರಮ ಭೂಮಿ ಹಂಚಿಕೆ ಆರೋಪದಡಿ ಮಾಜಿ ಡಿಸಿಎಂ ಆರ್ ಅಶೋಕ್ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್ಐಆರ್'ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಅಶೋಕ್'ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಬೆಂಗಳೂರು (ಜ.25): ಬಗರ್ ಹುಕುಂ ಸಾಗುವಳಿ ಸಮಿತಿಯಿಂದ ಅಕ್ರಮ ಭೂಮಿ ಹಂಚಿಕೆ ಆರೋಪದಡಿ ಮಾಜಿ ಡಿಸಿಎಂ ಆರ್ ಅಶೋಕ್ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್ಐಆರ್'ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಅಶೋಕ್'ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಏನಿದು ಆರೋಪ?

ಬಗರ್ ಹುಕುಂ ಸಾಗುವಳಿ ಸಮಿತಿಯಿಂದ ಅಕ್ರಮ ಭೂಮಿ ಹಂಚಿಕೆ ಆರೋಪದಡಿ ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ಎಫ್'ಐಆರ್ ದಾಖಲಿಸಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆ.13(1)(C), 13(1) (D), 13(2) ಐಪಿಸಿ 420, 120(ಬಿ)ಅಡಿ ಎಸಿಬಿ ಪ್ರಕರಣ ದಾಖಲು ಮಾಡಿಕೊಂಡಿತ್ತು.  ಬಗರ್ ಹುಕುಂ ಭೂ ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದ ಆರ್. ಅಶೋಕ್ ಅಕ್ರಮ ಭೂ ಹಂಚಿಕೆ ವಿಚಾರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.  ಈಗಾಗಲೇ ತಹಶೀಲ್ದಾರ್ ರಾಮಚಂದ್ರಯ್ಯ ಸೇರಿದಂತೆ ಕಂದಾಯ ಅಧಿಕಾರಿ ಗವೀಗೌಡ, ಚೌಡೇಗೌಡ ಹಾಗೂ ಅಂದಿನ ಗ್ರಾಮ ಲೆಕ್ಕಿಗಾಧಿಕಾರಿ ಶಶಿಧರ ವಿರುದ್ಧವೂ ಆರೋಪ ಕೇಳಿಬಂದಿತ್ತು.

ಇಂದು ಹೈಕೋರ್ಟ್ ಏಕಸದಸ್ಯ ಪೀಠ  ಮಧ್ಯಂತರ ತಡೆಯಾಜ್ಞೆ ನೀಡಿದೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ರಾಂಗ್‌ ಫ್ಲೈಟ್‌ ಹತ್ತಿದ್ದಾರೆ: ಸಿದ್ಧರಾಮಯ್ಯ ವಿರುದ್ಧ ಆರ್‌.ಅಶೋಕ್‌ ಗರಂ!
ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!