
ಮಂಗಳೂರು(ಎ.29): ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ ಕೊಲೆಗೆ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಂಬಂಧಕ್ಕೆ ಅಡ್ಡ ಬಂದಿದ್ದಕ್ಕೆ ಸ್ವತಃ ತಂಗಿಯೇ ಪ್ರಿಕರನ ಜೊತೆ ಸೇರಿ ಅಣ್ಣನ ಹತ್ಯೆ ಮಾಡಿಸಿದ್ದಾಳೆ.
ತಂಗಿ ಕಾವ್ಯ, ಹಾಗೂ ಆಕೆಯ ಪ್ರಿಯಕರ ಗೌತಮ್, ಕಾರ್ತಿಕ್ ರಾಜ್ನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿ ಆಗಿದ್ದರು. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಂದು ತಂಗಿ ಕಾವ್ಯ ಹಾಗೂ ತಂಗಿಯ ಪ್ರಿಯಕರ ಗೌತಮ್ನನ್ನು ಬಂಧಿಸಿದ್ದಾರೆ.
2016ರ ಆಗಸ್ಟ್ 23ರಂದು ಕೊಣಾಜೆಯಲ್ಲಿ ಕಾರ್ತಿಕ್ ರಾಜ್ ಬರ್ಬರ ಹತ್ಯೆಯಾಗಿತ್ತು. ಕಾರ್ತಿಕ್ ರಾಜ್ ಹತ್ಯೆ ಕೇಸ್ ರಾಜ್ಯ ಮಟ್ಟದಲ್ಲಿ ಭಾರೀ ವಿವಾದ ಸೃಷ್ಟಿಸಿತ್ತು. ಬಿಜೆಪಿ, ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.