
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಬಿಜೆಪಿ ಎಸ್’ಸಿ ಘಟಕದ ಜಿಲ್ಲಾಧ್ಯಕ್ಷ ಕಿಡ್ನಾಪ್ ಕೇಸ್’ಗೆ ಇದೀಗ ಹೊಸ ಟ್ವಿಸ್ಟ್ ದೊರಕಿದೆ.
ಜಿಲ್ಲಾಧ್ಯಕ್ಷ ಮುನಿಕೃಷ್ಣ ಅವರನ್ನು ಯಾರೂ ಕೂಡ ಅಪಹರಣ ಮಾಡಿಲ್ಲ ಎನ್ನುವ ವಿಚಾರವೀಗ ಬಹಿರಂಗವಾಗಿದೆ. ಆದರೆ ಅವರನ್ನು ಪೊಲೀಸರೇ ಅರೆಸ್ಟ್ ಮಾಡಿದ್ದಾರೆ ಎನ್ನುವುದು ಇದೀಗ ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸ ಕೋಟೆ ಪೊಲೀಸರಿಂದಲೇ ಜಿಲ್ಲಾಧ್ಯಕ್ಷನ ಅರೆಸ್ಟ್ ಆಗಿದೆ. ಮುನಿಕೃಷ್ಣ ವಿರುದ್ಧ ಹಲವು ವಾರೆಂಟ್’ಗಳು ಇದ್ದ ಕಾರಣದಿಂದ ಅವರನ್ನು ಬಂಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಭೀಮಾಶಂಕರ್ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.