ಉದ್ಯಮಿ ಪುತ್ರ ಗೀತಾವಿಷ್ಣು ಎಸ್ಕೇಪ್ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್!: ದೇವರಾಜ್ 2ನೇ ಪುತ್ರನಿಗೆ ಸಂಕಷ್ಟ

Published : Oct 02, 2017, 12:17 PM ISTUpdated : Apr 11, 2018, 12:34 PM IST
ಉದ್ಯಮಿ ಪುತ್ರ ಗೀತಾವಿಷ್ಣು ಎಸ್ಕೇಪ್ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್!: ದೇವರಾಜ್ 2ನೇ ಪುತ್ರನಿಗೆ ಸಂಕಷ್ಟ

ಸಾರಾಂಶ

ಉದ್ಯಮಿ ಪುತ್ರ ಗೀತಾವಿಷ್ಣು ಎಸ್ಕೇಪ್ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಈ ಹಿಂದೆ ಉದ್ಯಮಿ ಪುತ್ರ ಗೀತಾವಿಷ್ಣು ಜೊತೆ ಸ್ಯಾಂಡಲ್'ವುಡ್ ನಟರಾದ ಪ್ರೇಮ್, ದಿಗಂತ್ ಹಾಗೂ ಪ್ರಜ್ವಲ್ ದೇವರಾಜ್ ಇದ್ದರೆಂಬ ಮಾತು ಕೇಳಿ ಬಂದಿತ್ತು. ಆದರೆ ನಟರು ತಾವು ಗೋವಾದಲ್ಲಿರುವುದಾಗಿ ಹೇಳಿಕೆ ನೀಡಿದ್ದರು. ಇದೀಗ  ಎಲ್ಲಾ ಬೆಳವಣಿಗೆಗಳ ನಡುವೆಯೇ  ನಟ ದೇವರಾಜ್ ಎರಡನೇ ಪುತ್ರ ಪ್ರಣಮ್​​​ ದೇವರಾಜ್​'ಗೆ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದ್ದಾರೆ.

ಬೆಂಗಳೂರು(ಅ.02): ಉದ್ಯಮಿ ಪುತ್ರ ಗೀತಾವಿಷ್ಣು ಎಸ್ಕೇಪ್ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಈ ಹಿಂದೆ ಅಪಘಾತ ನಡೆದಾಗ ಉದ್ಯಮಿ ಪುತ್ರ ಗೀತಾವಿಷ್ಣು ಜೊತೆ ಸ್ಯಾಂಡಲ್'ವುಡ್ ನಟರಾದ ಪ್ರೇಮ್, ದಿಗಂತ್ ಹಾಗೂ ಪ್ರಜ್ವಲ್ ದೇವರಾಜ್ ಇದ್ದರು ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ನಟರು ತಾವು ಗೋವಾದಲ್ಲಿರುವುದಾಗಿ ಹೇಳಿಕೆ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೇವರಾಜ್ ಎರಡನೇ ಪುತ್ರ ಪ್ರಣಮ್​​​ ದೇವರಾಜ್​'ಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಸೆ.29ರಂದು ಜಯನಗರ ಸೌತ್​ ಎಂಡ್​ ಸರ್ಕಲ್​​ ಬಳಿ ಸಂಭವಿಸಿದ ಕಾರು ಅಪಘಾತ ಪ್ರಕರಣದ ವಿಚಾರಣೆಗೆ ಹಾಜರಾಗಲು ಖ್ಯಾತ ನಟ ದೇವರಾಜ್​ ಎರಡನೇ ಮಗ ಪ್ರಣಮ್​​ ದೇವರಾಜ್'ಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಇದನ್ನು ಗಮನಿಸಿದರೆ ಅಪಘಾತ ನಡೆದಂದು ಉದ್ಯಮಿ ಪುತ್ರನೊಂದಿಗೆ  ಪ್ರಣಮ್​​ ದೇವರಾಜ್ ಇದ್ದರಾ ಎಂಬ ಅನುಮಾನ ಮೂಡಿದೆ. ಅಲ್ಲದೆ ಗೀತಾವಿಷ್ಣು ಸಹೋದರ ಆದಿ ನಾರಾಯಣ, ಪ್ರಣಮ್ ದೇವರಾಜ್, ಫೈಸಲ್, ಶಶಾಂಕ್ ಸೇರಿ ಒಟ್ಟು 6 ಮಂದಿಗೆ ನೋಟೀಸ್ ಜಾರಿಯಾಗಿದೆ.

ಇನ್ನು ಪುತ್ರನಿಗೆ ನೋಟಿಸ್ ಜಾರಿಗೊಳಿಸಿದ ವಿಚಾರವಾಗಿ ಮಾತನಾಡಿರುವ ನಟ ದೇವರಾಜ್ ' ಅಪಘಾತ ನಡೆದ ರಾತ್ರಿ ನನ್ನ ಮಗ ತನ್ನ ಸ್ನೇಹಿತರ ಮನೆಯಲ್ಲಿದ್ದ, ಅಪಘಾತ ನಡೆದ ಕಾರಿನಲ್ಲಿರಲಿಲ್ಲ. ಗೀತಾವಿಷ್ಣು ನನ್ನ ಮಗನ ಸ್ನೇಹಿತ ಹೀಗಾಗಿ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಅಲ್ಲಿಗೆ ತೆರಳಿದ್ದನಷ್ಟೇ' ಎಂದಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ: ಡಿ.ಕೆ.ಶಿವಕುಮಾರ್‌
ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು