ಸಿದ್ದರಾಮಯ್ಯಗೆ ಸಿಕ್ಕಿದ ಗೆಲುವು

Published : May 11, 2019, 08:15 AM IST
ಸಿದ್ದರಾಮಯ್ಯಗೆ ಸಿಕ್ಕಿದ ಗೆಲುವು

ಸಾರಾಂಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೆಲುವೊಂದು ಸಿಕ್ಕಿದೆ. ಏನದು?

ಬೆಂಗಳೂರು :  ಬಡ್ತಿ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇವೆ. ಇದೇ ವೇಳೆ ಪಟ್ಟು ಬಿಡದೆ ಹೋರಾಟ ಮಾಡಿ ಎಸ್‌ಸಿ,ಎಸ್‌ಟಿ ವರ್ಗಕ್ಕೆ ಗೆಲುವು ತಂದುಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವಣ್ಣ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪು ಸಿದ್ದರಾಮಯ್ಯ ಅವರ ಗೆಲುವು ಎಂದಿರುವ ಅವರು, ಬಡ್ತಿ ಮೀಸಲಾತಿ ಮುಂದುವರೆಸುವ ಬಗ್ಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕಾಯಿದೆ ಜಾರಿಗೆ ತಂದಿದ್ದರು. ಜತೆಗೆ ನ್ಯಾಯಾಲಯದಲ್ಲಿ ಹೋರಾಟ ನಡೆಸುವ ಮೂಲಕ ಬಡ್ತಿ ಮೀಸಲಾತಿ ಪರ ನಿಂತಿದ್ದರು. ಪ್ರಸ್ತುತ ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕಾಂಗ್ರೆಸ್‌ ಸದಾ ಬಡವ, ಶೋಷಿತ ವರ್ಗಗಳ ಪರವಾಗಿರುತ್ತದೆ ಎಂದು ಸಾಬೀತಾಗಿದೆ.

ಜತೆಗೆ ಇದು ಸಿದ್ದರಾಮಯ್ಯ ಅವರ ಗೆಲುವು ಎಂಬುದನ್ನೂ ನಾವು ಹೆಮ್ಮೆಯಿಂದ ಹೇಳಿಕೊಳ್ಳಬೇಕಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಹೊಯ್ಸಳರ ಕಾಲದ ಅಪರೂಪದ ವೀರಗಲ್ಲು ಪತ್ತೆ, ಚಿತ್ರದುರ್ಗದ ವೀರನ ಮರಣದ ಉಲ್ಲೇಖ!
Dhurandhar 2: ಧುರಂಧರ್ 2 ಬಗ್ಗೆ ಇಂಥ ಭವಿಷ್ಯ ನುಡಿದ ರಾಮ್ ಗೋಪಾಲ್ ವರ್ಮಾ.. ಜಗತ್ತೇ ಶಾಕ್!