ಬಿಹಾರದಲ್ಲಿ ಎದುರಾಯ್ತು ರಾಜಕೀಯ ಕೋಲಾಹಲ

Published : Feb 27, 2018, 08:44 AM ISTUpdated : Apr 11, 2018, 12:57 PM IST
ಬಿಹಾರದಲ್ಲಿ ಎದುರಾಯ್ತು ರಾಜಕೀಯ ಕೋಲಾಹಲ

ಸಾರಾಂಶ

ಇತ್ತೀಚೆಗಷ್ಟೇ ಬಿಹಾರದ ಮುಜಫ್ಫರಪುರ ಜಿಲ್ಲೆಯಲ್ಲಿ 9 ಶಾಲಾ ಮಕ್ಕಳನ್ನು ಬಲಿಪಡೆದ ಬೊಲೆರೋ ವಾಹನವನ್ನು ಇಲ್ಲಿನ ಸ್ಥಳೀಯ ಬಿಜೆಪಿ ಶಾಸಕನೇ ಚಾಲನೆ ಮಾಡಿದ್ದ ಎಂದು ಆರೋಪಿಸಲಾಗಿದೆ

ಪಟನಾ: ಇತ್ತೀಚೆಗಷ್ಟೇ ಬಿಹಾರದ ಮುಜಫ್ಫರಪುರ ಜಿಲ್ಲೆಯಲ್ಲಿ 9 ಶಾಲಾ ಮಕ್ಕಳನ್ನು ಬಲಿಪಡೆದ ಬೊಲೆರೋ ವಾಹನವನ್ನು ಇಲ್ಲಿನ ಸ್ಥಳೀಯ ಬಿಜೆಪಿ ಶಾಸಕನೇ ಚಾಲನೆ ಮಾಡಿದ್ದ ಎಂದು ಆರೋಪಿಸಲಾಗಿದೆ. ವಾಹನ ಚಾಲನೆ ಮಾಡಿದವರು ಬಿಜೆಪಿ ಶಾಸಕ ಮನೋಜ್‌ ಬೈತಾ ಎಂಬುದಾಗಿ ಆಪಾದಿಸಲಾಗಿದ್ದು, ಸದ್ಯ ತಲೆ ಮರೆಸಿಕೊಂಡಿದ್ದಾನೆ. ಹೀಗಾಗಿ, ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈತನ್ಮಧ್ಯೆ, ಘಟನೆ ಸಂಬಂಧ ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ ನೇತೃತ್ವದಲ್ಲಿ ಸೋಮವಾರ ರಾಜಭವನ ಚಲೋ ನಡೆಸಿದ ಆರ್‌ಜೆಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ರಾಜ್ಯದಲ್ಲಿ ಪಾನನಿಷೇಧ ಜಾರಿಯಲ್ಲಿದ್ದರೂ ಬಿಜೆಪಿ ಶಾಸಕ ಕುಡಿದು ಹೇಗೆ ವಾಹನ ಚಲಾಯಿಸಿದ ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ.

ಈ ನಡುವೆ, ಬೊಲೆರೋ ವಾಹನ ಚಲಾಯಿಸಿದ್ದಾನೆ ಎಂಬ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಮುಖಂಡ ಮನೋಜ್‌ ಬೈತಾ, ಬಿಹಾರ ಡಿಸಿಎಂ ಸುಶೀಲ್‌ ಕುಮಾರ್‌ ಮೋದಿ ಜತೆಗಿನ ಫೋಟೊಗಳು ಪ್ರತ್ಯಕ್ಷವಾಗಿವೆ. ಆದಾಗ್ಯೂ, ಅಪಘಾತ ಘಟನೆಯಿಂದ ಅಂತರ ಕಾಯ್ದುಕೊಂಡಿರುವ ಬಿಜೆಪಿ, ಆರೋಪಿಗೂ ತನಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದೆ.

ಮನೋಜ್‌ ಬೈತಾ ಎಂಬ ಹೆಸರಿನ ಕಾರ್ಯಕರ್ತರಾಗಲೀ ಅಥವಾ ಮುಖಂಡರಾಗಿಲೀ ಪಕ್ಷದಲ್ಲಿ ಇಲ್ಲ ಎಂದು ಬಿಜೆಪಿ ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದೆ. 9 ಮಕ್ಕಳ ಸಾವಿಗೆ ಕಾರಣವಾಗಿರುವ ಬೊಲೆರೋ ವಾಹನ ಬಿಜೆಪಿ ಮುಖಂಡನದ್ದು ಎಂಬ ಮಾಹಿತಿ ಸಂಪೂರ್ಣ ಸುಳ್ಳು. ಪೊಲೀಸರು ಮತ್ತು ಸಿಎಂ ಅವರು ಆದೇಶಿಸಿದ ತನಿಖೆಯಿಂದಷ್ಟೇ ವಾಹನದ ಮಾಲೀಕ ಯಾರು ಎಂಬುದರ ಸತ್ಯ ಬಯಲಾಗಿದೆ ಎಂದು ಬಿಜೆಪಿಯ ಬಿಹಾರ ಉಪಾಧ್ಯಕ್ಷ ದೇವೇಶ್‌ ಕುಮಾರ್‌ ತಿಳಿಸಿದ್ದಾರೆ.

ಕಳೆದ ಶನಿವಾರದಂದು ಇಲ್ಲಿನ ಮುಜಾಫ್ಫರ್‌ಪುರ ಜಿಲ್ಲೆಯಲ್ಲಿ ಬೊಲೆರೋ ವಾಹನ ಡಿಕ್ಕಿ ಹೊಡೆದು 9 ಶಾಲಾ ಮಕ್ಕಳು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಆ ವಾಹನವನ್ನು ಸ್ಥಳೀಯ ಬಿಜೆಪಿ ಶಾಸಕನೇ ಚಾಲನೆ ಮಾಡುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ