ತೋಟದಿಂದ ಮಾವಿನ ಹಣ್ಣು ಕಿತ್ತಿದ್ದಕ್ಕೆ 10 ವರ್ಷದ ಬಾಲಕನ ಹತ್ಯೆ

Published : Jun 23, 2018, 09:17 AM IST
ತೋಟದಿಂದ ಮಾವಿನ ಹಣ್ಣು ಕಿತ್ತಿದ್ದಕ್ಕೆ 10 ವರ್ಷದ ಬಾಲಕನ ಹತ್ಯೆ

ಸಾರಾಂಶ

ತೋಟದಿಂದ ಮಾವಿನ ಹಣ್ಣನ್ನು ಕಿತ್ತ ಕಾರಣಕ್ಕಾಗಿ ತೋಟದ ಮಾಲೀಕ 10 ವರ್ಷದ ಬಾಲಕನೊಬ್ಬನನ್ನು ಗುಂಡಿಟ್ಟು ಹತ್ಯೆ ಮಾಡಿರುವ ದಾರುಣ ಘಟನೆ ಬಿಹಾರದ ಖಜಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ಖಜಾರಿಯಾ (ಬಿಹಾರ): ತೋಟದಿಂದ ಮಾವಿನ ಹಣ್ಣನ್ನು ಕಿತ್ತ ಕಾರಣಕ್ಕಾಗಿ ತೋಟದ ಮಾಲೀಕ 10 ವರ್ಷದ ಬಾಲಕನೊಬ್ಬನನ್ನು ಗುಂಡಿಟ್ಟು ಹತ್ಯೆ ಮಾಡಿರುವ ದಾರುಣ ಘಟನೆ ಬಿಹಾರದ ಖಜಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ಶೇರ್‌ಘಡ್‌ ಗ್ರಾಮದ ಸತ್ಯಮ್‌ ಎಂಬ ಬಾಲಕ ಗುರುವಾರ ಮಾವಿನ ತೋಪಿನಲ್ಲಿ ಹಣ್ಣುಗಳನ್ನು ಕೀಳುತ್ತಿದ್ದ.

ಇದನ್ನು ನೋಡಿದ ರಾಮ್‌ ಯಾದವ್‌ ಎಂಬಾತ ಬಾಲಕನಿಗೆ ತೋಟದಿಂದ ತೆರಳುವಂತೆ ಸೂಚಿಸಿದ್ದ. ಆದರೆ, ಅದಕ್ಕೆ ಬಾಲಕ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಆತ ಗನ್‌ನಿಂದ ತಲೆಗೆ ಗುಂಡು ಹಾರಿಸಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌