ಬಿಹಾರದಲ್ಲಿ ಕಾಂಗ್ರೆಸ್ ಹೋಳು?: 27 ಶಾಸಕರ ಪೈಕಿ 14 ಮಂದಿ ಜೆಡಿಯುನತ್ತ

Published : Sep 03, 2017, 12:03 PM ISTUpdated : Apr 11, 2018, 12:57 PM IST
ಬಿಹಾರದಲ್ಲಿ ಕಾಂಗ್ರೆಸ್ ಹೋಳು?: 27 ಶಾಸಕರ ಪೈಕಿ 14 ಮಂದಿ ಜೆಡಿಯುನತ್ತ

ಸಾರಾಂಶ

ಮಹಾಘಟಬಂಧನ ತೊರೆದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ಪಾಳೆಯಕ್ಕೆ ಮರಳಿದ್ದರಿಂದ ತೀವ್ರ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ಸಿಗೆ ಮತ್ತೊಂದು ಬಹುದೊಡ್ಡ ಹೊಡೆತ ಬೀಳುವಂತಿದೆ. ಪಕ್ಷದ 27 ಶಾಸಕರ ಪೈಕಿ 14 ಮಂದಿ ಜೆಡಿಯು ಬಾಗಿಲು ಬಡಿಯುತ್ತಿರುವುದರಿಂದ ಬಿಹಾರದಲ್ಲಿ ಕಾಂಗ್ರೆಸ್ ಹೋಳಾಗುವ ಅಪಾಯಕ್ಕೆ ಸಿಲುಕಿದೆ.

ಪಟನಾ/ನವದೆಹಲಿ(ಸೆ.03): ಮಹಾಘಟಬಂಧನ ತೊರೆದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ಪಾಳೆಯಕ್ಕೆ ಮರಳಿದ್ದರಿಂದ ತೀವ್ರ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ಸಿಗೆ ಮತ್ತೊಂದು ಬಹುದೊಡ್ಡ ಹೊಡೆತ ಬೀಳುವಂತಿದೆ. ಪಕ್ಷದ 27 ಶಾಸಕರ ಪೈಕಿ 14 ಮಂದಿ ಜೆಡಿಯು ಬಾಗಿಲು ಬಡಿಯುತ್ತಿರುವುದರಿಂದ ಬಿಹಾರದಲ್ಲಿ ಕಾಂಗ್ರೆಸ್ ಹೋಳಾಗುವ ಅಪಾಯಕ್ಕೆ ಸಿಲುಕಿದೆ.

ಈ ವಿಷಯ ಗೊತ್ತಾಗುತ್ತಿದ್ದಂತೆ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಬಿಹಾರಕ್ಕೆ ರವಾನಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಹಾರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚೌಧರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸದಾನಂದ ಸಿಂಗ್ ಅವರನ್ನು ದೆಹಲಿಗೆ ಕರೆಸಿಕೊಂಡು, ಪಕ್ಷ ಹೋಳಾಗುವುದನ್ನು ತಪ್ಪಿಸುವಂತೆ ತಾಕೀತು ಮಾಡಿದ್ದಾರೆ.

ಈಗಾಗಲೇ ಒಂದು ಡಜನ್‌'ನಷ್ಟು ಶಾಸಕರು ನಿತೀಶ್ ಹಾಗೂ ಜೆಡಿಯು ನಾಯಕರ ಜತೆ ಸಮಾಲೋಚನೆ ನಡೆಸಿ, ತಮ್ಮ ಮುಂದಿನ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ. 14 ಶಾಸಕರ ಪಾಳೆಯಕ್ಕೆ ಇನ್ನು ನಾಲ್ವರು ಸೇರ್ಪಡೆಯಾದರೆ ಮೂರನೇ ಎರಡರಷ್ಟು ಶಾಸಕರು ಒಗ್ಗೂಡಿದಂತಾಗಲಿದ್ದು, ಅವರು ಜೆಡಿಯುಗೆ ಸೇರ್ಪಡೆಯಾದರೂ ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲಿದ್ದಾರೆ.

ಮಹಾಘಟಬಂಧನ ಸರ್ಕಾರದಲ್ಲಿ ಕಾಂಗ್ರೆಸ್ಸಿನ ನಾಲ್ವರು ಸಚಿವರಾಗಿದ್ದರು. ಉಳಿದವರು ನಿಗಮ- ಮಂಡಳಿ ಹುದ್ದೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಅಷ್ಟರಲ್ಲಿ ನಿತೀಶ್ ಎನ್‌ಡಿಎ ಪಾಳೆಯಕ್ಕೆ ಜಿಗಿದಿದ್ದರಿಂದ ಅವರ ಕನಸು ಭಗ್ನವಾಗಿದೆ. ಜತೆಗೆ ಆಕ್ರಮಣಕಾರಿ ವರ್ತನೆ ತೋರುತ್ತಿರುವ ಯಾದವ ಸಮುದಾಯದ ಲಾಲು ಜತೆ ಕಾಂಗ್ರೆಸ್ ಗುರುತಿಸಿಕೊಂಡರೆ ತಮ್ಮ ಮತದಾರರು ಕೈಬಿಡಬಹುದು. ಅದರ ಬದಲು ಮೃದು ಧೋರಣೆ ಹೊಂದಿರುವ ನಿತೀಶ್ ಜತೆ ಗುರುತಿಸಿಕೊಳ್ಳುವುದು ಒಳ್ಳೆಯದು ಎಂಬ ಭಾವನೆ ಈ ಶಾಸಕರಲ್ಲಿದೆ ಎಂದು ಹೇಳಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಯಚೂರು: ತಾಯಿ ಬುದ್ದಿವಾದ ಹೇಳಿದಕ್ಕೆ ತುಂಗಭದ್ರಾ ಕಾಲುವೆಗೆ ಹಾರಿ ದುಡುಕಿದ ಮಗಳು!
ಬೆಂಗಳೂರಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ!