
ಬಿಹಾರ (ಸೆ.14): ಆರ್ ಜೆಡಿ ಮುಖಂಡ ಮಹಮ್ಮದ್ ಶಹಾಬುದ್ದೀನ್ ರವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಬಿಹಾರ ಸರ್ಕಾರ ಸುಪ್ರೀಂ ಮೆಟ್ಟಿಲೇರಿದೆ.
ಪಾಟ್ನಾ ಹೈಕೋರ್ಟ್ ಜಾಮೀನು ನೀಡಿ ಸಿವಾನ್ ಸೆಂಟ್ರಲ್ ಜೈಲಿನಿಂದ ಶಹಾಬುದ್ದೀನ್ ಬಿಡುಗಡೆಯಾಗಿದ್ದರು. ಇವರ ಬಿಡುಗಡೆ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಪ್ರಕರಣದಲ್ಲಿ ಇವರ ಮೇಲೆ ಚಾರ್ಜ್ ಹಾಕಲಾಗಿದೆ.
ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಇವರ ಬಿಡುಗಡೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಶಹಾಬುದ್ದೀನ್ ರನ್ನು ಜೈಲಿಗೆ ಕಳುಹಿಸಬೇಕೆಂದು ನಿತೀಶ್ ಕುಮಾರ್ ಸರ್ಕಾರದ ಮೇಲೆ ಒತ್ತಡವಿದೆ. ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ಬಳಿಕ ನಿತೀಶ್ ಕುಮಾರ್ ಸಂದರ್ಭವಶಾರ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.