
ಪಟ್ನಾ (ಜ. 29): ಜನಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡುವುದಿಲ್ಲ ಎಂಬ ದೂರು ಸಾಮಾನ್ಯ. ಅಂಥದ್ದರಲ್ಲಿ ಬಿಹಾರದ ಶಾಸಕನೊಬ್ಬ ತಾನು ವಿಮಾನದಲ್ಲಿ ಪುಕ್ಕಟೆಯಾಗಿ ಹಾರಾಟ ಮಾಡುವುದಕ್ಕಾಗಿ ಸಂಸತ್ತಿಗೆ ಆಯ್ಕೆ ಆಗಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾನೆ.
ಪಟನಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೊಕಮಾ ಕ್ಷೇತ್ರದ ಶಾಸಕ ಅನಂತ್ ಸಿಂಗ್ ತಾನು ಲೋಕಸಭೆ ಚುನಾವಣೆಯಲ್ಲಿ ಮುನ್ಗರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾನೆ. ಇದಕ್ಕೆ ಕಾರಣವನ್ನೂ ನೀಡಿರುವ ಆತ, ಸಂಸದನಾದರೆ ದೆಹಲಿಗೆ ವಿಮಾನದಲ್ಲಿ ಯಾವಾಗ ಬೇಕಾದರೂ ಹಾರಾಟ ನಡೆಸಬಹುದು.
ತನಗೆ ವಿಮಾನದಲ್ಲಿ ಹಾರಾಡುವುದೆಂದರೆ ಇಷ್ಟ. ಒಂದು ವೇಳೆ ತನ್ನನ್ನು ಜೈಲಿಗೆ ಕಳುಹಿಸಿದರೂ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.