
ಉತ್ತರಪ್ರದೇಶ(ಸೆ. 18): ಎರಡು ದಿನಗಳ ಹಿಂದೆ ಇಲ್ಲಿಯ ಬಿಜ್ನೋರ್ ಜಿಲ್ಲೆಯಲ್ಲಿ ಸಂಭವಿಸಿದ್ದ ಹಿಂದೂ-ಮುಸ್ಲಿಮ್ ಕೋಮುಗಲಭೆ ಘಟನೆ ಸಂಬಂಧ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಒಟ್ಟು 29 ಜನರ ವಿರುದ್ಧ ಎಫ್'ಐಆರ್ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಜಗತ್ ರಾಮ್ ತ್ರಿಪಾಠಿ ತಿಳಿಸಿದ್ದಾರೆ. ಎಫ್'ಐಆರ್ ದಾಖಲಾಗಿರುವ ಜನರ ಪೈಕಿ ಸನ್ಸಾರ್ ಸಿಂಗ್ ಎಂಬ ವ್ಯಕ್ತಿಯ ಹೆಸರು ಕೇಳಿಬಂದಿದೆ. ಇದೇ ವೇಳೆ, ಗಲಭೆ ಹರಡುವ ಭಯದಿಂದ ಮುನ್ನೆಚ್ಚರಿಕೆಯಾಗಿ ಪ್ರದೇಶಾದ್ಯಂತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಏನದು ಘಟನೆ?
ಸೆ.16ರಂದು ಬಿಜ್ನೋರ್ ಜಿಲ್ಲೆಯ ಕೋಟ್ವಾಲಿ ತಾಲೂಕಿನ ಪೇಡಾ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂದು ಬೆಳಗ್ಗೆ ಹಿಂದೂ ಹೆಣ್ಮಕ್ಕಳು ಶಾಲೆಗೆ ಹೋಗುವ ವೇಳೆ ಕೆಲ ಮುಸ್ಲಿಮ್ ಯುವಕರು ರೇಗಿಸಿದ್ದಾರೆ. ವಿಷಯ ತಿಳಿದ ಆ ಹೆಣ್ಮಕ್ಕಳ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ ಯುವಕರ ವಿರುದ್ಧ ಕಲ್ಲು ತೂರಾಟ ನಡೆಸಿದ್ದಾರೆ. ಇದು ಕೋಮುಗಲಭೆಗೆ ಕಿಡಿ ಹೊತ್ತಿಕೊಂಡಿದೆ. ಹಿಂಸಾಚಾರಗಳಿಂದ ಮೂವರು ಮುಸ್ಲಿಮರು ಹತ್ಯೆಯಾಗಿದ್ದಾರೆ. 12 ಮಂದಿಗೆ ಗಾಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.