
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಪೆಟ್ರೋಲ್ ಬಂಕ್ ನಲ್ಲಿ ನ.25 ರಂದು ವ್ಯಕ್ತಿಯೊಬ್ಬ ತನ್ನ ಬೈಕ್ ಗೆ ಪೆಟ್ರೋಲ್ ಫಿಲ್ ಮಾಡಿಸಿಕೊಳ್ಳುತ್ತಿರುವಾಗ ಬೆಂಕಿ ಹತ್ತಿಕೊಂಡಿತ್ತು. ನಂತರ ಪೆಟ್ರೋಲ್ ಫಿಲ್ಲಿಂಗ್ ಮಷಿನ್ ಗೂ ಆವರಿಸಿ ಸುಟ್ಟು ಕರಕಲಾಗಿತ್ತು. ಬೆಂಕಿ ಹತ್ತಲು ಏನು ಕಾರಣ ಎನ್ನುವುದು ನಿಗೂಢವಾಗಿಯೇ ಉಳಿದಿತ್ತು. ಆದರೆ ಇದೀಗ ಬಂಕ್ ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಗಳು ಬೆಂಕಿ ಯಾಕೆ ಹೊತ್ತಿಕೊಂಡಿತು ಎನ್ನುವುದು ಬಿಚ್ಚಿಟ್ಟಿದೆ. ಬೈಕ್'ನಲ್ಲಿ ಬರುವ ವ್ಯಕ್ತಿ ಪೆಟ್ರೋಲ್ ತುಂಬಿಸಿಕೊಂಡು ಟ್ಯಾಂಕ್ ಡಕ್ಕನ್ ಬಂದ್ ಮಾಡಿ ಬೈಕ್ ಸ್ಟ್ರಾರ್ಟ್ ಮಾಡಿದ ತಕ್ಷಣವೇ ಬೈಕಗೆ ಬೆಂಕಿ ಹೊತ್ತಿಕೊಂಡಿದೆ. ಹಾಗಾಗಿ ಇದು ಬೈಕ್ ಇಂಜಿನ್ ನಲ್ಲಿರುವ ದೋಷ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.