
ಬೆಂಗಳೂರು(ಫೆ.10): ಕಂಬಳ ಮತ್ತು ಎತ್ತಿನ ಗಾಡಿ ಸ್ಪರ್ಧೆಗೆ ಇದ್ದಂತಹ ಅಡ್ಡಿ ಈಗ ನಿವಾರಣೆಯಾಗಿದೆ. ಕರ್ನಾಟಕ ಪ್ರಾಣಿ ಹಿಂಸೆ ತಡೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಕಂಬಳಕ್ಕೆ ಅನುಕೂಲ ಮಾಡಿಕೊಡುವಂತೆ ವಿಧಾನಸಭೆಯಲ್ಲಿ ಈ ವಿಧೇಯಕ ಮಂಡನೆಯಾಗಿದೆ. ಈ ಮೂಲಕ ಕಂಬಳಕ್ಕೆ ಕಾನೂನಿನ ಮಾನ್ಯತೆ ದೊರಕಿದೆ.
ವಿಧಾನಸಭೆಯಲ್ಲಿ ಕರ್ನಾಟಕ ಪ್ರಾಣಿ ಹಿಂಸೆ ತಡೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಕಂಬಳ, ಎತ್ತಿನ ಗಾಡಿ ಸ್ಪರ್ಧೆಯ ಜೊತೆಗೆ ಕೊಬ್ಬರಿ ಹೋರಿ ಓಟದ ಸ್ಪರ್ಧೆಗೂ ಈ ವಿಧಾಯಕದಲ್ಲಿ ವಿನಾಯಿತಿ ನೀಡಲಾಗಿದೆ. ಆದರೆ ಎತ್ತು, ಹೋರಿಗಳಿಗೆ ಹಿಂಸೆ ಮಾಡದಂತೆ ವಿಧೇಯಕದಲ್ಲಿ ಶರತ್ತು ವಿಧಿಸಲಾಗಿದೆ. ಈ ಮೂಲಕ ಕಂಬಳಕ್ಕಿದ್ದ ಬಹುದೊಡ್ಡ ವಿಘ್ನ ನಿವಾರಣೆಯಾದಂತಾಗಿದೆ.
ಕಂಬಳ ಕಾಪಾಡಿ ಎಂಬ ಅಭಿಯಾನವನ್ನು ಸುವರ್ಣ ನ್ಯೂಸ್ ಮಾಡಿತ್ತು, ಇದಕ್ಕೆ ರಾಜ್ಯದಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.