ಭಯೋತ್ಪಾದನಾ ವಿರೋಧಿ ತಿದ್ದುಪಡಿ ಮಸೂದೆ ಅಂಗೀಕಾರ!

Published : Jul 24, 2019, 06:30 PM IST
ಭಯೋತ್ಪಾದನಾ ವಿರೋಧಿ ತಿದ್ದುಪಡಿ ಮಸೂದೆ ಅಂಗೀಕಾರ!

ಸಾರಾಂಶ

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ| ಕಾನೂನು ಬಾಹಿರ ಚಟುವಟಿಕೆಗಳ ತಿದ್ದುಪಡಿ ವಿಧೇಯಕ ಅಸ್ತು| ಲೋಕಸಭೆಯಲ್ಲಿ ಯುಎಪಿಎ ತಿದ್ದುಪಡಿ ಮಸೂದೆ ಅಂಗೀಕಾರ| ಭಯೋತ್ಪಾದಕರೊಡನೆ ಸಂಪರ್ಕ ಹೊಂದಿರುವ ವ್ಯಕ್ತಿ ಉಗ್ರವಾದಿ ಎಂದು ಘೋಷಣೆ| ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ| ಯುಎಪಿಎ ತಿದ್ದುಪಡಿ ಮಸೂದೆ ವಿರೋಧಿಸಿದ್ದ ಕಾಂಗ್ರೆಸ್|

ನವದೆಹಲಿ(ಜು.23): ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಕಾನೂನು ಬಾಹಿರ ಚಟುವಟಿಕೆಗಳ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಅಂಗೀಕರಿಸಿದೆ.

ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಯೋತ್ಪಾದನಾ ವಿರೋಧಿ ಕಾನೂನಿನ ತಿದ್ದುಪಡಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಯುಎಪಿಎ ತಿದ್ದುಪಡಿ ಮಸೂದೆ ಜಾರಿಯಿಂದ ಕಾನೂನು ಜಾರಿ ಸಂಸ್ಥೆಗಳನ್ನು ಭಯೋತ್ಪಾದಕರಿಗಿಂತ ಒಂದು ಹೆಜ್ಜೆ ಮುಂದಿಡಲು ಸಹಾಯಕವಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದೇ ವೇಳೆ ಭಯೋತ್ಪಾದನಾ ವಿರೋಧಿ ಕಾನೂನುಗಳ ದುರುಪಯೋಗ ಸಾಧ್ಯವಿಲ್ಲ ಎಂದಿರುವ ಅಮಿತ್ ಶಾ, ಯಾವುದೇ ಕಾರಣಕ್ಕೂ ಭಯೋತ್ಪಾದನೆ ಚಿಗುರೊಡೆಯಲು ನಾವು ಬಿಡುವುದಿಲ್ಲ ಎಂದು ಗೃಹಸ ಸಚಿವರು ಸ್ಪಷ್ಟಪಡಿಸಿದರು.

ಯುಎಪಿಎ ಕಾನೂನು ಜಾರಿಯಿಂದಾಗಿ ಭಯೋತ್ಪಾದಕರೊಡನೆ ಸಂಪರ್ಕ ಹೊಂದಿದೆವರೆಂದು  ಶಂಕಿಸಲಾಗಿರುವ ವ್ಯಕ್ತಿಯನ್ನು ಉಗ್ರವಾದಿ ಎಂದು ಘೋಷಿಸುವ ಅಧಿಕಾರ ಸರ್ಕಾರಕ್ಕೆ ಲಭಿಸಲಿದೆ.

ಯುಎಪಿಎ ತಿದ್ದುಪಡಿ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಇದೇ ವೇಳೆ ತಿದ್ದುಪಡಿಯನ್ನು ವಿರೋಧಿಸಿದ್ದ ಕಾಂಗ್ರೆಸ್’ನ್ನು ಅಮಿತ್ ಶಾ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ