'ರೋಗಗ್ರಸ್ಥ' ಉತ್ತರ ಪ್ರದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

Published : Jan 28, 2017, 06:31 AM ISTUpdated : Apr 11, 2018, 01:00 PM IST
'ರೋಗಗ್ರಸ್ಥ' ಉತ್ತರ ಪ್ರದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

ಸಾರಾಂಶ

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಬಿಹಾರದಂತೆ ಉತ್ತರ ಪ್ರದೇಶವು ಅಭಿವೃದ್ಧಿ ಹೊಂದಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ, ಎಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಾ ಶಾ ಹೇಳಿದ್ದಾರೆ.

ಲಕ್ನೋ(ಜ.28): ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶಕ್ಕೆ ಅಂಟಿಕೊಂಡಿರುವ ‘ರೋಗಗ್ರಸ್ಥ’ ರಾಜ್ಯದ ಹಣೆಪಟ್ಟಿಯನ್ನು ತೊಡೆದು ಹಾಕಲು ಬಿಜೆಪಿಗೆ ಅಧಿಕಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಬಿಹಾರದಂತೆ ಉತ್ತರ ಪ್ರದೇಶವು ಅಭಿವೃದ್ಧಿ ಹೊಂದಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ, ಎಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಾ ಶಾ ಹೇಳಿದ್ದಾರೆ.

ತ್ರಿವಳಿ ತಲಾಕ್ ಬಗ್ಗೆ ಉತ್ತರ ಪ್ರದೇಶದ ಮುಸ್ಲಿಮ್ ಮಹಿಳೆಯರ ಅಭಿಪ್ರಾಯ ಸಂಗ್ರಹಿಸಲಾಗುವುದು, ಹಾಗೂ ಅದರ ಆಧಾರದಲ್ಲಿ ಸುಪ್ರೀಂ ಕೋರ್ಟ್’ನಲ್ಲಿ ವಾದ ಮಂಡಿಸಲಾಗುವುದೆಂದು ಶಾ ಹೇಳಿದ್ದಾರೆ.

ಬಿಜೆಪಿಯು ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಅನಧಿಕೃತ ಕಸಾಯಿಖಾನೆಗಳನ್ನು ಮುಚ್ಚಲಾಗುವುದೆಂದು ಅಮಿತ್ ಶಾ ಹೇಳಿದ್ದಾರೆ.

ಜತೆಗೆ, ರಾಜ್ಯದಲ್ಲಿ ಬೃಹತ್ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪನೆ,  ಕಾನೂನುಬಾಹಿರ ಗಣಿಗಾರಿಕೆಗೆ ತಡೆ, ಹಾಗೂ ಕೋಮುಗಲಭೆಗಳ ಸಂದರ್ಭದಲ್ಲಿ ಜನರು ವಲಸೆ ಹೋಗುವುದನ್ನು ತಡೆಯಲು ತಂಡಗಳನ್ನು ರಚಿಸಲಾಗುವುದೆಂದು ಶಾ ಹೇಳಿದ್ದಾರೆ.

ಪ್ರಣಾಳಿಕೆಯ ಮುಖ್ಯಾಂಶಗಳು:

  • ಪ್ರತಿ ಜಿಲ್ಲೆಯಲ್ಲಿ ಮೂರು ಮಹಿಳಾ ಪೊಲೀಸ್ ಠಾಣೆಗಳ ಸ್ಥಾಪನೆ
  • 24-ಗಂಟೆ ವಿದ್ಯುತ್
  • ಯುವಜನರಿಗೆ ಲ್ಯಾಪ್’ಟಾಪ್ ಹಾಗೂ ಅದರೊಂದಿಗೆ ಪ್ರತಿವರ್ಷ 1ಜಿಬಿ ಉಚಿತ ಇಂಟರ್ನೆಟ್
  • ರೈತರ ಸಾಲ ಮನ್ನಾ, ಹಾಗೂ ಶೂನ್ಯ ಬಡ್ಡಿದರದೊಂದಿಗೆ ಹೊಸಸಾಲ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ‘ಇಯರ್‌ರಿಂಗ್‌’ ಸೃಷ್ಟಿಸಿದ ಕುತೂಹಲ!
ಸುಧಾಮೂರ್ತಿ ಡೀಪ್‌ಫೇಕ್‌ ವಿಡಿಯೋ ವೈರಲ್‌ : ನಂಬಿ ಮೋಸಹೋಗದಂತೆ ವಿನಂತಿ