ಅಬ್ ಕಿ ಬಾರ್ ಮಾಣಿಕ್ ಸರ್ಕಾರ್ ಅಲ್ಲ, ಬಿಜೆಪಿ ಸರ್ಕಾರ್! ತ್ರಿಪುರಾ ಸಿಎಂ ಆಗಿ ಬಿಪ್ಲಬ್ ದೇಬ್ ಪದಗ್ರಹಣ

Published : Mar 09, 2018, 12:58 PM ISTUpdated : Apr 11, 2018, 12:49 PM IST
ಅಬ್ ಕಿ ಬಾರ್ ಮಾಣಿಕ್ ಸರ್ಕಾರ್ ಅಲ್ಲ, ಬಿಜೆಪಿ ಸರ್ಕಾರ್! ತ್ರಿಪುರಾ ಸಿಎಂ ಆಗಿ ಬಿಪ್ಲಬ್ ದೇಬ್ ಪದಗ್ರಹಣ

ಸಾರಾಂಶ

ಎಡಪಂಥೀಯರ ಅಬೇಧ್ಯ ಕೋಟೆ ಎನಿಸಿಕೊಂಡಿರುವ ತ್ರಿಪುರಾದಲ್ಲಿ ಬಿಜೆಪಿ ತಂತ್ರಗಾರಿಕೆಯಿಂದ ಕಮಲ ಅರಳಿದೆ. 

ಬೆಂಗಳೂರು (ಮಾ. 09): ಎಡಪಂಥೀಯರ ಅಬೇಧ್ಯ ಕೋಟೆ ಎನಿಸಿಕೊಂಡಿರುವ ತ್ರಿಪುರಾದಲ್ಲಿ ಬಿಜೆಪಿ ತಂತ್ರಗಾರಿಕೆಯಿಂದ ಕಮಲ ಅರಳಿದೆ. 

ಇಂದು ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಬಿಪ್ಲಬ್ ದೇಬ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಜಿಷ್ಣು ದೆಬ್ಬಾರ್ಮಾ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. 

ತ್ರಿಪುರಾದಲ್ಲಿ ಕಳೆದ 25 ವರ್ಷಗಳಿಂದ ಮಾಣಿಕ್ ಸರ್ಕಾರದ ಆಡಳಿತವಿತ್ತು. ಅಂದರೆ 4 ಬಾರಿ ಮಾಣಿಕ್ ಸರ್ಕಾರ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಎಡಪಂಥೀಯರ ಭದ್ರಕೋಟೆ ಎಂದೆ ತ್ರಿಪುರಾವನ್ನು ಕರೆಯಲಾಗುತ್ತಿತ್ತು. ಅಲ್ಲಿ ಬಿಜೆಪಿಗೆ ಕಮಲ ಅರಳಿಸುವುದು ಸವಾಲಾಗಿತ್ತು. ಸೂಕ್ತ ರಾಜಕೀಯ ತಂತ್ರಗಾರಿಗೆ, ಹೈವೋಲ್ಟೇಜ್ ಪ್ರಚಾರ, ಎಡ ಪಂಥೀಯರ ಸೈದ್ಧಾಂತಿಕ ವಿಚಾರದಿಂದ ಬೇಸತ್ತ ಜನ ಬಿಜೆಪಿ ಕಡೆ ವಾಲಿದ್ದು ಇವೆಲ್ಲಾ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿ ಈ ಬಾರಿ ಚುನಾವಣೆಯಲ್ಲಿ ಐಪಿಎಫ್’ಟಿ ಮೈತ್ರಿಯಿಂದ 43 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: ವರನಿಗೆ ರಜೆ ಸಿಗದ ಕಾರಣ ವಿಡಿಯೋ ಮೂಲಕ ಅದ್ಧೂರಿ ನಿಶ್ಚಿತಾರ್ಥ! ಫೋಟೋ ಇಲ್ಲಿವೆ ನೋಡಿ
ಕಡಿಮೆ ಬಿಯರ್ ಉತ್ಪಾದನೆಗೆ ಯುಬಿ ಕಂಪನಿಗೆ ವಿಧಿಸಿದ್ದ 29 ಕೋಟಿ ರೂ. ದಂಡ ರದ್ದು!