
ಹಾಸನ: ಬಿಜೆಪಿಯ 30 ಶಾಸಕರು ಜೆಡಿಎಸ್ಗೆ ಬರಲು ಸಿದ್ಧರಿದ್ದಾರೆ, ಮಾಜಿ ಸಿಎಂ ಯಡಿಯೂರಪ್ಪನವರಿಗೆ ನೋವಾಗುವ ಕೆಲಸ ಮಾಡಬಾರದು ಎಂದು ಶಾಸಕರನ್ನು ಬರುವುದು ಬೇಡ ಎನ್ನುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಬಿಜೆಪಿಯ 30 ಶಾಸಕರು ಜೆಡಿಎಸ್ಗೆ ಬರಲು ಸಿದ್ಧರಿದ್ದಾರೆ. ಯಡಿಯೂರಪ್ಪನವರ ಆರೋಗ್ಯದ ದೃಷ್ಟಿಯಿಂದ ಅವರ ಮನಸ್ಸಿಗೆ ನೋವು ಉಂಟು ಮಾಡಬಾರದೆಂದು ತಡೆ ಹಿಡಿಯಲಾಗಿದೆ ಎಂದ ರೇವಣ್ಣ, ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರಿಗೆ ಒಳ್ಳೇಯ ಗಿಫ್ಟ್ ಕೊಡುತ್ತೇವೆ, ಕಾದು ನೋಡಿರಿ ಎಂದು ತಿಳಿಸಿದರು.
ಈಗ ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ರೈತರ 49 ಸಾವಿರ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ. ಉಳಿದ ಸಾಲವನ್ನು ಮನ್ನಾ ಮಾಡಿಲ್ಲ. ಏಕೆಂದರೆ ಬಿಜೆಪಿಯವರು ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ಹೇರಿ ಸಾಲ ಮನ್ನಾ ಮಾಡಿಸಿ ಹೆಸರು ಪಡೆದುಕೊಳ್ಳಲಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.