ಬಿಜೆಪಿಯ 30 ಶಾಸಕರು ಜೆಡಿಎಸ್‌ಗೆ?

Published : Aug 11, 2018, 11:07 AM ISTUpdated : Sep 09, 2018, 08:36 PM IST
ಬಿಜೆಪಿಯ 30 ಶಾಸಕರು ಜೆಡಿಎಸ್‌ಗೆ?

ಸಾರಾಂಶ

ಈಗಾಗಲೇ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಸಂಬಂಧ ಭರ್ಜರಿ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಎನ್ನುವ ಆರೋಪ ಪ್ರತ್ಯಾರೋಪಗಳ ಬೆನ್ನಲ್ಲೇ ಇದೀಗ ಎಚ್.ಡಿ ರೇವಣ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.  

ಹಾಸನ: ಬಿಜೆಪಿಯ 30 ಶಾಸಕರು ಜೆಡಿಎಸ್‌ಗೆ ಬರಲು ಸಿದ್ಧರಿದ್ದಾರೆ, ಮಾಜಿ ಸಿಎಂ ಯಡಿಯೂರಪ್ಪನವರಿಗೆ ನೋವಾಗುವ ಕೆಲಸ ಮಾಡಬಾರದು ಎಂದು ಶಾಸಕರನ್ನು ಬರುವುದು ಬೇಡ ಎನ್ನುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಆಪರೇಷನ್‌ ಕಮಲ ಮಾಡುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಬಿಜೆಪಿಯ 30 ಶಾಸಕರು ಜೆಡಿಎಸ್‌ಗೆ ಬರಲು ಸಿದ್ಧರಿದ್ದಾರೆ. ಯಡಿಯೂರಪ್ಪನವರ ಆರೋಗ್ಯದ ದೃಷ್ಟಿಯಿಂದ ಅವರ ಮನಸ್ಸಿಗೆ ನೋವು ಉಂಟು ಮಾಡಬಾರದೆಂದು ತಡೆ ಹಿಡಿಯಲಾಗಿದೆ ಎಂದ ರೇವಣ್ಣ, ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರಿಗೆ ಒಳ್ಳೇಯ ಗಿಫ್ಟ್‌ ಕೊಡುತ್ತೇವೆ, ಕಾದು ನೋಡಿರಿ ಎಂದು ತಿಳಿಸಿದರು.

ಈಗ ಕಾಂಗ್ರೆಸ್‌ -ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ರೈತರ 49 ಸಾವಿರ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ. ಉಳಿದ ಸಾಲವನ್ನು ಮನ್ನಾ ಮಾಡಿಲ್ಲ. ಏಕೆಂದರೆ ಬಿಜೆಪಿಯವರು ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ಹೇರಿ ಸಾಲ ಮನ್ನಾ ಮಾಡಿಸಿ ಹೆಸರು ಪಡೆದುಕೊಳ್ಳಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ