ಬಿಜೆಪಿ ಕಾರ್ಯಕರ್ತ ಹುಸೇನ್ ಮೇಲೆ ಮಾರಣಾಂತಿಕ ಹಲ್ಲೆ

Published : May 04, 2017, 02:46 AM ISTUpdated : Apr 11, 2018, 12:49 PM IST
ಬಿಜೆಪಿ ಕಾರ್ಯಕರ್ತ ಹುಸೇನ್ ಮೇಲೆ ಮಾರಣಾಂತಿಕ ಹಲ್ಲೆ

ಸಾರಾಂಶ

ಏಪ್ರಿಲ್ 26ರಂದು ಥಣಿಸಂದ್ರ ಕಾಂಗ್ರೆಸ್ ಮುಖಂಡ ಸ್ಟಾರ್ ಹುಸೇನ್ ಎಂಬುವರು ಹುಸೇನ್'ನನ್ನು ತಮ್ಮ ಕಚೇರಿಗೆ ಕರೆಸಿ ಬಿಜೆಪಿ ಕಚೇರಿ ತೆರೆಯದಂತೆ ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಸ್ಟಾರ್ ಹುಸೇನ್ ಹಾಗೂ ಪಳನಿ ಎಂಬುವರು ಮೊಬೈಲ್ ಮುಖಾಂತರ ಪ್ರಾಣ ಬೆದರಿಕೆ ಹಾಕಿರುವುದಾಗಿ ಹುಸೇನ್ ಸಂಬಂಧಿಕರು ಆರೋಪ ಮಾಡಿದ್ದಾರೆ.  

ಬೆಂಗಳೂರು: ಥಣಿಸಂದ್ರ ವಾರ್ಡ್​'ನ ಬಿಜೆಪಿ ಕಾರ್ಯಕರ್ತ ಹುಸೇನ್ ಎಂಬುವನಿಗೆ ಮಾರಣಾಂತಿಕವಾಗಿ ಚಾಕುವಿನಿಂದ ಇರಿಯಲಾಗಿದೆ. ನಿನ್ನೆ ರಾತ್ರಿ ದ್ವಿಚಕ್ರ ವಾಹನವೊಂದರಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಥಣಿಸಂದ್ರದಲ್ಲಿರುವ ಬಿಜೆಪಿ ಕಚೇರಿ ಬಳಿ ಹುಸೇನ್ ಜೊತೆ ಮಾತುಕತೆಗೆ ಇಳಿದಿದ್ದಾರೆ. ಮಾತುಕತೆ ವೇಳೆ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗೊಂಡ ಹುಸೇನ್ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ಬಗ್ಗೆ ಗಾಯಾಳು ಹುಸೇನ್'ನ ಸಂಬಂಧಿಕರು ಹೇಳೋದೇ ಬೇರೆ. ಏಪ್ರಿಲ್ 26ರಂದು ಥಣಿಸಂದ್ರ ಕಾಂಗ್ರೆಸ್ ಮುಖಂಡ ಸ್ಟಾರ್ ಹುಸೇನ್ ಎಂಬುವರು ಹುಸೇನ್'ನನ್ನು ತಮ್ಮ ಕಚೇರಿಗೆ ಕರೆಸಿ ಬಿಜೆಪಿ ಕಚೇರಿ ತೆರೆಯದಂತೆ ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಸ್ಟಾರ್ ಹುಸೇನ್ ಹಾಗೂ ಪಳನಿ ಎಂಬುವರು ಮೊಬೈಲ್ ಮುಖಾಂತರ ಪ್ರಾಣ ಬೆದರಿಕೆ ಹಾಕಿರುವುದಾಗಿ ಹುಸೇನ್ ಸಂಬಂಧಿಕರು ಆರೋಪ ಮಾಡಿದ್ದಾರೆ.  

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೋಲಿಸರು, ಸ್ಥಳದಲ್ಲಿದ್ದ ಸಿಸಿಟಿವಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಣ್ಣಲ್ಲಿ ಮರೆಯಾಗಿದ್ದ ಜೈನರ ಕಾಲದ ಕಲ್ಯಾಣಿಗೆ ಮರುಜೀವ ನೀಡಿದ ಉದ್ಯೋಗ ಖಾತ್ರಿ ಯೋಜನೆ
ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!