
ಬಾಗಲಕೋಟೆ (ಫೆ. 26): ರಾಹುಲ್ ಗಾಂಧಿ ಬಾಗಲಕೋಟೆಗೆ ಭೇಟಿ ಹಿನ್ನೆಲೆಯಲ್ಲಿ ರಸ್ತೆಗೆ ಗೋಮೂತ್ರ ಸಿಂಪಡಿಸಿ ಬಿಜೆಪಿ ಕಾರ್ಯಕರ್ತರು ಶುಚಿಗೊಳಿಸಿದ್ದಾರೆ.
ಮುಚಖಂಡಿ ಕ್ರಾಸ್’ನಲ್ಲಿ ಗೋ ಮೂತ್ರ ಹಾಕಿ ಶುದ್ಧೀಕರಣ ಮಾಡಿದ್ದಾರೆ. ರಾಹುಲ್ ಗಾಂಧಿ ಬಾಗಲಕೋಟೆಗೆ ಬಂದು ಅಪವಿತ್ರ ಮಾಡಿದ್ದಾರೆ ಅಂತ ರಸ್ತೆಯನ್ನು ಶುಚಿಗೊಳಿಸಿದ ಬಿಜೆಪಿ ಯವ ಕಾರ್ಯಕರ್ತರು ಗೋವಿಗೆ ವಿಶೇಷ ಪೂಜೆ ಮಾಡಿ, ಸೇಬು ಹಣ್ಣು ತಿನ್ನಿಸಿದ್ದಾರೆ.
ಅಧಿಕಾರಿಗಳನ್ನ ದುರುಪಯೋಗಪಡಿಸಿಕೊಂಡು ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ನಿನ್ನೆ ರಾಹುಲ್ ಭೇಟಿ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.