ಸಿಎಂ ಯೋಗಿ ವಿರುದ್ಧ ಎಸ್‌ಬಿಎಸ್‌ಪಿ ಅಸಮಾಧಾನ: ಮೈತ್ರಿಯಲ್ಲಿ ಬಿರುಕು

Published : Apr 09, 2018, 08:51 AM ISTUpdated : Apr 14, 2018, 01:13 PM IST
ಸಿಎಂ ಯೋಗಿ ವಿರುದ್ಧ ಎಸ್‌ಬಿಎಸ್‌ಪಿ ಅಸಮಾಧಾನ: ಮೈತ್ರಿಯಲ್ಲಿ ಬಿರುಕು

ಸಾರಾಂಶ

ಈಗಾಗಲೇ ದೇಶದ ಹಲವೆಡೆ ಮಿತ್ರಪಕ್ಷಗಳಿಂದಲೇ ಮುಜುಗರ ಎದುರಿಸುತ್ತಿರುವ ಬಿಜೆಪಿಗೆ ಉತ್ತರ ಪ್ರದೇಶದಲ್ಲೂ ಹಿನ್ನಡೆಯಾಗುವ ಲಕ್ಷಣವಿದೆ.

ಲಖನೌ: ಈಗಾಗಲೇ ದೇಶದ ಹಲವೆಡೆ ಮಿತ್ರಪಕ್ಷಗಳಿಂದಲೇ ಮುಜುಗರ ಎದುರಿಸುತ್ತಿರುವ ಬಿಜೆಪಿಗೆ ಉತ್ತರ ಪ್ರದೇಶದಲ್ಲೂ ಹಿನ್ನಡೆಯಾಗುವ ಲಕ್ಷಣವಿದೆ.

 ಅಲ್ಲಿನ ಎನ್‌ಡಿಎ ಮೈತ್ರಿಕೂಟದ ಎಸ್‌ಬಿಎಸ್‌ಪಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿ, ಮೈತ್ರಿ ಪುನರ್‌ ಪರಿಶೀಲಿಸುವ ಬಗ್ಗೆ ಮಾತನಾಡಿದೆ.

ತಮ್ಮ ಪಕ್ಷವನ್ನು ನಿರ್ಲಕ್ಷಿಸುವ ಮೂಲಕ ಆದಿತ್ಯನಾಥ ಮೈತ್ರಿಧರ್ಮ ಪಾಲಿಸುತ್ತಿಲ್ಲ ಎಂದು ಸುಹೇಲ್‌ದೇವ್‌ ಭಾರತೀಯ ಸಮಾಜ ಪಾರ್ಟಿ (ಎಸ್‌ಬಿಎಸ್‌ಪಿ) ಮುಖಂಡ ಓಂ ಪ್ರಕಾಶ್‌ ರಾಜ್‌ಭರ್‌ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ ಲಖನೌಗೆ ಬಂದಾಗ ಪರಿಸ್ಥಿತಿಯ ಬಗ್ಗೆ ವಿವರವಾಗಿ ಚರ್ಚಿಸುತ್ತೇನೆ.

ಪಕ್ಷ ಎತ್ತುವ ವಿಷಯಗಳ ಬಗ್ಗೆ ಶಾ ಒಪ್ಪದಿದ್ದಲ್ಲಿ, ಮೈತ್ರಿಯ ಬಗ್ಗೆ ಮರುಪರಿಶೀಲಿಸಲಾಗುತ್ತದೆ ಎಂದು ರಾಜ್‌ಭರ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌