
ಬೆಂಗಳೂರು, [ಅ.11]: ರಾಜ್ಯದಲ್ಲಿ ಎದುರಾಗಿರುವ ಮೂರು ಲೋಕಸಬಾ ಹಾಗೂ ಎರಡು ವಿಧಾನಸಭಾ ಉಪಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ.
ಅದರಲ್ಲಿ ಮಂಡ್ಯ ಲೋಕಸಭೆ ಉಪಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದರೆ, ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ.
ಇನ್ನು ಬಿಜೆಪಿಯಿಂದ ಅಚ್ಚರಿ ಹೆಸರೊಂದು ತೇಲಿಬಂದಿದೆ. ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ವಿಧಾನಪರಿಷತ್ ಸದಸ್ಯ ಅಶ್ವತ್ ನಾರಾಯಣ್ ಗೌಡ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಅಶ್ವತ್ ನಾರಾಯಣ್ ಅವರು ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾಚನಹಳ್ಳಿ ಗ್ರಾಮದವರಾಗಿದ್ದರಿಂದ ಜೆಡಿಎಸ್ ಗೆ ಬಿಗ್ ಫೈಟ್ ಕೊಡಬಹುದು ಎಬುವುದು ಬಿಜೆಪಿಯ ಪ್ಲಾನ್.
ಈ ಹಿಂದೆ ಮಾಜಿ ಡಿಸಿಎಂ ಆರ್.ಅಶೋಕ್ ಹೆಸರು ಕೇಳಿ ಬಂದಿತ್ತು. ಆದ್ರೆ, ಅಶೋಕ್ ಹೊರಗಿನವರಾಗಿರೋದ್ರಿಂದ ವರ್ಕೌಟ್ ಆಗುವುದಿಲ್ಲ ಎನ್ನುವುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯವರೇ ಆದ ಹಾಲಿ ಬಿಜೆಪಿ ವಕ್ತಾರರಾಗಿರುವ ಅಶ್ವತ್ ನಾರಾಯಣ ಅವರನ್ನು ಅಂತಿಮಗೊಳಿಸಲು ಬಿಜೆಪಿ ನಿರ್ಧರಿಸಿದ್ದು, ಇಂದು ಅಧಿಕೃತ ಘೋಷಣೆ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.