ಚಿಂಚೋಳಿ, ಕುಂದಗೋಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ

Published : Apr 28, 2019, 04:41 PM ISTUpdated : Apr 28, 2019, 04:48 PM IST
ಚಿಂಚೋಳಿ, ಕುಂದಗೋಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಸಾರಾಂಶ

ಚಿಂಚೋಳಿ ಹಾಗೂ ಕುಂದಗೋಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬೆನ್ನಲ್ಲೆ ಇದೀಗ ಬಿಜೆಪಿಯೂ ಸಹ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 

ಬೆಂಗಳೂರು, [ಏ.28]: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ವಿಧಾನಸಭೆ ಉಪಚುನಾವಣೆಯ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. 

ಕುಂದಗೋಳ ಹಾಗೂ ಚಿಂಚೋಳಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಇಂದು [ಭಾನುವಾರ] ತನ್ನ ಅಭ್ಯರ್ಥಿಗಳನ್ನ ಪ್ರಕಟಿಸಿದೆ.

ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರವಾದ ಕಲಬುರಗಿ ಜಿಲ್ಲೆ ಚಿಂಚೊಳ್ಳಿ ಉಪಚುನಾವಣೆಗೆ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಧಾರವಾಡ ಜಿಲ್ಲೆಯು ಕುಂದಗೋಳ ಕ್ಷೇತ್ರಕ್ಕೆ ಎಸ್.ಐ. ಚಿಕ್ಕನಗೌಡ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ.

ಚಿಂಚೋಳಿ,ಕುಂದಗೋಳ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್

ನಿನ್ನೆ [ಶನಿವಾರ] ಕಾಂಗ್ರೆಸ್ ಹಾಗು ಜೆಡಿಎಸ್ ತನ್ನ ಮೈತ್ರಿ ಅಭ್ಯರ್ಥಿಗಳನ್ನ ಘೋಷಿಸಿದ್ದು, ಚಿಂಚೋಳಿಯಿಂದ ಸುಬಾಷ್ ರಾಥೋಡ್ ಹಾಗೂ ಕುಂದಗೋಳಕ್ಕೆ ಕುಸುಮಾವತಿ ಶಿವಳ್ಳಿ ಅವರನ್ನು ಕಣಕ್ಕಿಳಿಸಿದೆ.

ಉಮೇಶ್ ರಾಜೀನಾಮೆಯಿಂದ ತೆರವಾದ ಕಲಬುರಗಿ ಜಿಲ್ಲೆ ಚಿಂಚೋಳಿ ಹಾಗೂ ಸಿ.ಎಸ್ .ಶಿವಳ್ಳಿ ನಿಧನದಿಂದ ತೆರವಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ಇದೇ ಮೇ 19ರಂದು ಉಪಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ