
ನವದೆಹಲಿ : 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ತಯಾರಿ ಆರಂಭಿಸಿದ್ದು, 17 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಆದರೆ ಕರ್ನಾಟಕದ ಪ್ರಭಾರಿಯನ್ನಾಗಿ ಈ ಪಟ್ಟಿಯಲ್ಲಿ ಯಾರನ್ನೂ ನೇಮಿಸಿಲ್ಲ.
ವಿಶೇಷವೆಂದರೆ ತೆಲಂಗಾಣದ ಉಸ್ತುವಾರಿಯನ್ನಾಗಿ ಕರ್ನಾಟಕದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ನೇಮಿಸಲಾಗಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕನ್ನಡಿಗರಾಗಿದ್ದಾರೆ.
ಇನ್ನು ಕೇಂದ್ರ ಸಚಿವರಾದ ಪ್ರಕಾಶ ಜಾವಡೇಕರ್ ಅವರನ್ನು ರಾಜಸ್ಥಾನಕ್ಕೆ ಹಾಗೂ ಥಾವರ್ಚಂದ ಗೆಹ್ಲೋಟ್ ಅವರನ್ನು ಉತ್ತರಾಖಂಡಕ್ಕೆ ನೇಮಿಸಲಾಗಿದೆ.
ಮಹತ್ವದ ಉತ್ತರಪ್ರದೇಶಕ್ಕೆ 3 ಉಸ್ತುವಾರಿಗಳ ನೇಮಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಜತೆ ಎಣ್ಣೆ-ಸೀಗೆಕಾಯಿ ಸಂಬಂಧ ಹೊಂದಿದ್ದ ಗೋವರ್ಧನ್ ಝಡಾಪಿಯಾ ಅವರೂ ಇದರಲ್ಲಿ ಇರುವುದು ಮತ್ತೊಂದು ವಿಶೇಷ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.