
ನವದೆಹಲಿ(ಡಿ.07): ಪ್ರಧಾನಿ ನರೇಂದ್ರ ಮೋದಿ ಒಬ್ಬ ಕೀಳು ಮಟ್ಟದ ರಾಜಕಾರಣಿ, ನೀಚ ಎಂಬ ಮಣಿಶಂಕರ್ ಅಯ್ಯರ್ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ.
ಕಾಂಗ್ರೆಸ್ ಹಿರಿಯ ಮುಖಂಡ ಅಯ್ಯರ್ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್'ಗೆ ತನ್ನದೇ ಆದ ಸಂಸ್ಕೃತಿ ಮತ್ತು ಪರಂಪರೆಯಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ ಅಯ್ಯರ್ ಬಳಸಿದ ಭಾಷೆಯನ್ನು ನಾನು ಒಪ್ಪುವುದಿಲ್ಲ. ಮೋದಿ ಬಗ್ಗೆ ಬಳಸಿದ ಭಾಷೆಗೆ ಅಯ್ಯರ್ ಕ್ಷಮೆ ಕೋರಬೇಕೆಂದು ಬಯಸುತ್ತೇನೆಂದು ಹೇಳಿದ್ದಾರೆ.
ಇನ್ನು ಮತ್ತೋರ್ವ ಕಾಂಗ್ರೆಸ್ ಮುಖಂಡ ಹಾಗೂ ಗುಜರಾತ್ ಉಸ್ತುವಾರಿ ಅಶೋಕ್ ಗೆಹ್ಲೋಟ್, 'ಅಯ್ಯರ್ ಹೇಳಿಕೆ ದುರದೃಷ್ಟಕರವಾಗಿದ್ದು, ನಾನಿದನ್ನು ಒಪ್ಪುವುದಿಲ್ಲ' ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.