
ಪಣಜಿ :ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರಿಗೆ ಅನಾರೋಗ್ಯ ಎದುರಾಗಿದ್ದು ಇದೀಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಗೋವಾ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಗ್ವಾದಕ್ಕೆ ಕಾರಣವಾಗಿದೆ.
ಬಿಜೆಪಿಯು ಪರಿಕ್ಕರ್ ಅವರ ಅನಾರೋಗ್ಯದ ಸಂಬಂಧ ಹೆಚ್ಚು ನಿರ್ಲಕ್ಷ್ಯ ವಹಿಸಿದೆ. ಇದರಿಂದ ಅವರಿಗೆ ಅತ್ಯಂತ ನೋವುಂಟಾಗಿದೆ ಎಂದು ಗೋವಾ ಕಾಂಗ್ರೆಸ್ ಮುಖಂಡ ಗಿರೀಶ್ ಚೋಡಾಂಕರ್ ಹೇಳಿದ್ದಾರೆ.
ತೀವ್ರ ಅನಾರೋಗ್ಯದ ಸಂದರ್ಭದಲ್ಲಿಯೂ ಕೂಡ ಕೆಲಸ ಮಾಡುವಂತೆ ಅವರಿಗೆ ಬಿಜೆಪಿಯಿಂದ ಹೆಚ್ಚು ಒತ್ತಡ ಹೇರಲಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಬಳಿಕ 3 ತಿಂಗಳ ಕಾಲ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಇದೀಗ ಮರಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.