ರಾಮಮಂದಿರ ನಿರ್ಮಾಣ ಯಾಕಾಗ್ತಿಲ್ಲ, ಪ್ರಶ್ನೆ ಮಾಡಿದ್ದು ಓಮರ್‌ ಅಬ್ದುಲ್ಲಾ

Published : Dec 10, 2018, 06:26 PM ISTUpdated : Dec 10, 2018, 06:45 PM IST
ರಾಮಮಂದಿರ ನಿರ್ಮಾಣ ಯಾಕಾಗ್ತಿಲ್ಲ, ಪ್ರಶ್ನೆ ಮಾಡಿದ್ದು ಓಮರ್‌ ಅಬ್ದುಲ್ಲಾ

ಸಾರಾಂಶ

ಒಂದು ಕಡೆ ವಿಶ್ವದ ಅತಿ ಎತ್ರರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ನಿರ್ಮಿಸಿ ವಿಶ್ವವೆ ಬೆರಗು ಕಣ್ಣಿನಿಂದ ನೋಡುವಂತೆ ಮಾಡಿದ್ದರು. ಆದರೆ ಇದೆ ವಿಚಾರವನ್ನು ಇಟ್ಟುಕೊಂಡು ಜಮ್ಮು ಕಾಶ್ಮೀರದ ಮಾಜಿ ಸಿಎಂ ಉಮರ್ ಅಬ್ದುಲ್ಲಾ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಅಯೋಧ್ಯಾ ರಾಮಮಂದಿರ ವಿಚಾರವನ್ನು ತಂದು ಲಿಂಕ್ ಮಾಡಿದ್ದಾರೆ.

ನವದೆಹಲಿ[ಡಿ.10] ‘ವಿಶ್ವದ ಅತಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲು ಸಾಧ್ಯವಿದೆ, ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ನಿಮ್ಮ ಬಳಿ  ಯಾಕೆ ಸಾಧ್ಯವಾಗುತ್ತಿಲ್ಲ’ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಉಮರ್ ಅಬ್ದುಲ್ಲಾ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ  ಮಾತನಾಡಿದ ನ್ಯಾಶನಲ್ ಕಾನ್ಫರೆನ್ಸ್ ಮುಖಂಡ, ಯಾವಾಗಾ ಬಿಜೆಪಿ ಸೋಲು ಕಾಣುತ್ತದೆಯೋ ಆವಾಗೆಲ್ಲ ಇವರಿಗೆ ರಾಮ ಮಂದಿರದ ನೆನಪಾಗುತ್ತದೆ. ಮಂದಿರದ ವಿಚಾರವನ್ನು ಪ್ರಚಾರಕ್ಕೆಂದು ಮತ್ತೆ ಬಳಕೆ ಮಾಡಿಕೊಳ್ಳುತ್ತಾರೆ. ಗೆದ್ದರೆ ವಿಚಾರ ಅಲ್ಲಿಗೆ ಮುಗಿಯುತ್ತದೆ ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ವಾವ್...! ಬಾಹ್ಯಾಕಾಶದಿಂದ ಹೀಗೆ ಕಾಣುತ್ತೆ ಪಟೇಲರ 'ಏಕತಾ ಪ್ರತಿಮೆ'!

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ನರೇಂದ್ರ ಮೋದಿ ನವೆಂಬರ್‌ನಲ್ಲಿ ಲೋಕಾರ್ಪಣೆ ಮಾಡಿದ್ದರು. ರಾಮಮಂದಿರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದೂಡಿದೆ. ಆದರೆ ಅಯೋಧ್ಯೆ ವಿಚಾರ ಆಗಾಗ ರಾಜಕಾರಣಿಗಳ ಮಾತಿನಲ್ಲಿ ಪ್ರತಿಧ್ವನಿಸುತ್ತಲೇ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!
ನಿಮ್ಮ ಹೊಸ ಮನೆಗೆ ಪೇಂಟ್ ಮಾಡುವಾಗ ಈ 7 ತಪ್ಪು ಮಾಡಬೇಡಿ!