
ಜೈಪುರ (ಡಿ. 03): ಚುನಾವಣೆಗಳಲ್ಲಿ ಗೆಲ್ಲಲು ಅಭ್ಯರ್ಥಿಗಳು ಮನಸ್ಸಿಗೆ ಬಂದ ಎಲ್ಲಾ ರೀತಿಯ ಭರವಸೆ ನೀಡುವುದು ಹೊಸದೇನಲ್ಲ. ಆದರೆ ರಾಜಸ್ಥಾನದ ಬಿಜೆಪಿ ಅಭ್ಯರ್ಥಿಯೊಬ್ಬರು, ಕಾನೂನು ಬಾಹಿರ ಚಟುವಟಿಕೆಗೆ ಎಲ್ಲಾ ರೀತಿ ನೆರವು ನೀಡುವುದಾಗಿ ಭರವಸೆ ನೀಡುವ ಎಲ್ಲರನ್ನೂ ದಂಗುಬಡಿಸಿದ್ದಾರೆ.
ಸೋಜಟ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಬಿಜೆಪಿಯ ಶೋಭಾ ಚೌಹಾಣ್, ಶನಿವಾರ ಪೀಪಾಲಿಯಾ ಕಲಾ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಸ್ಥಳೀಯ ದೇವಸಿ ಸಮುದಾಯದ ಜನ, ತಮ್ಮ ಸಮುದಾಯದಲ್ಲಿ ಬಾಲ್ಯ ವಿವಾಹ ನಡೆಯುವ ವೇಳೆ ಪೊಲೀಸರು ಬಂದು ಅಡ್ಡಿ ಮಾಡುತ್ತಾರೆ ಎಂದು ಆರೋಪಿಸಿದ್ದರು. ಇದಕ್ಕೆ ತಕ್ಷಣದಲ್ಲಿಯೇ ಪರಿಹಾರ ಪ್ರಕಟಿಸಿದ ಶೋಭಾ, ತಾವು ಗೆದ್ದಲ್ಲಿ, ಬಾಲ್ಯ ವಿವಾಹದ ಸಂದರ್ಭದಲ್ಲಿ ಪೊಲೀಸರು ಅಡ್ಡಿ ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು. ಅವರ ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.