
ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಬಿಜೆಪಿಯವರು ಸಿದ್ಧಪಡಿಸಿರುವ ‘ಚಾಜ್ರ್ಶೀಟ್' ನೋಡಿದರೆ ನ್ಯಾಯಾ ಲಯವು ಅದನ್ನು ವಜಾ ಮಾಡಿ ಚಾಜ್ರ್ ಶೀಟ್ ಹಾಕಿದವರಿಗೇ ಶಿಕ್ಷೆ ನೀಡುತ್ತದೆ.
ಯಡಿಯೂರಪ್ಪ ಬಿಡುಗಡೆ ಮಾಡಿರುವ ಜಾಜ್ರ್ಶೀಟ್ ನೋಡಿದರೆ ನಗು ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷ ಅಲ್ಲ ‘ಭ್ರಷ್ಟಾಚಾರ ಜನತಾ ಪಕ್ಷ' ಎಂಬಂತಾಗಿದೆ. ಅವರ ಮನೆ ಜಗಳ ಬೀದಿ ಜಗಳವಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆಯೇ ಗೊಂದಲವಿದೆ. ಉಪ ಚುನಾವಣೆಯಲ್ಲಿ ಯಡಿಯೂರಪ್ಪ ನಾಯಕತ್ವದಲ್ಲಿ ಸೋತಿದ್ದಾರೆ. ಹೀಗಾಗಿ ಹತಾಶರಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.