
ಬೆಂಗಳೂರು (ಅ. 12): ಮುಂದಿನ ಒಂದೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಮತ್ತೆ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು. ಸರ್ಕಾರ ರಚನೆ ಮಾಡುವುದು ಗುರಿಯೋ? ಕನಸೋ? ಅದೇನೇ ಇರಲಿ, ಒಟ್ಟಿನಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ. ಮುಂದಿನ ಒಂದೆರಡು ತಿಂಗಳಲ್ಲಿ ಸರ್ಕಾರ ಬರಲಿದೆ.
ನಮಗೂ ಆಸೆ ಇದ್ದು, ನಾವೇನು ಸನ್ಯಾಸಿಗಳಲ್ಲ. ಯಾವುದೇ ಆಪರೇಷನ್ ಮಾಡಿಲ್ಲ. ಆದರೆ, ಲೋಕಸಭಾ ಚುನಾವಣೆ ವೇಳಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು. ಕೆಲ ದಿನಗಳ ಹಿಂದೆ ಆಪರೇಶನ್ ಕಮಲ ನಡೆಯುತ್ತಿದೆ ಎಂಬ ಸುದ್ದಿ ಹಬ್ಬಿತ್ತು. ಸ್ವತಃ ಸಿಎಂ ಕುಮಾರಸ್ವಾಮಿಯವರೇ ಆಪರೇಶನ್ ಕಮಲದ ಬಗ್ಗೆ ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.