
ಬೆಂಗಳೂರು (ಸೆ.18): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಕೇಂದ್ರ ಸರ್ಕಾರ ಮತ್ತು ಆರ್’ಎಸ್’ಎಸ್ ಪಾತ್ರವಿದೆ ಎಂದು ಸಾಹಿತಿ ಚಂಪಾ ಹೇಳಿಕೆ ಹಿನ್ನಲೆಯಲ್ಲಿ ಮಂಡ್ಯದ ಬಿಜೆಪಿ ಕಾರ್ಯಕರ್ತ ಸಿಎಂಗೆ ಪತ್ರ ಬರೆದಿದ್ದಾರೆ.
ಗೌರಿ ಹತ್ಯೆ ಪ್ರಕರಣದ ತನಿಖೆಯನ್ನು ಎಸ್’ಐಟಿ ಬದಲು CIT( ಚಂಪಾ ಇನ್ವೆಷ್ಟೀಗೇಶನ್ ಟೀಮ್ )ಗೆ ವಹಿಸುವಂತೆ ವ್ಯಂಗ್ಯದ ಪತ್ರ ಬರೆದಿದ್ದಾರೆ.
ಸಾಹಿತಿಯಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ವಕ್ತಾರನಂತೆ ಕೇಂದ್ರ ಸರ್ಕಾರ ಮತ್ತು ಆರ್’ಎಸ್’ಎಸ್ ವಿರುದ್ದ ಮಾಡುತ್ತಿರೋ ಆರೋಪವನ್ನು ಬಿಜೆಪಿ ಕಾರ್ಯಕರ್ತರು ಖಂಡಿಸಿದ್ದಾರೆ. ರಾಜ್ಯ ಸರ್ಕಾರ ಸಾಹಿತಿ ಚಂಪಾರನ್ನು ನೇಮಿಸಿ ಅವರ ಟೀಮಿನಿಂದ ತನಿಖೆ ನಡೆಸಿ ಆದಷ್ಟು ಬೇಗ ಗೌರಿ ಹತ್ಯೆಯ ಹಂತಕರನ್ನು ಬಂಧಿಸಲಿ ಎಂದು ಮಂಡ್ಯದ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಸಿಎಂಗೆ ಪತ್ರ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.