
ನವದೆಹಲಿ(ಮಾ.23): ದೇಶಾದ್ಯಂತ ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್,ಬಿಜೆಪಿ ಹಾಗೂ ಟಿಎಂಸಿಯ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಪಶ್ಚಿಮ ಬಂಗಾಳದಿಂದ ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ, ಟಿಎಂ'ಸಿ ನಾಯಕ ರಂಜನ್ ಬಿಸ್ವಾಸ್ ಹಾಗೂ ಛತ್ತೀಸ್'ಘಡ್'ನಿಂದ ಬಿಜೆಪಿ ಅಭ್ಯರ್ಥಿ ಸರೋಜ್ ಪಾಂಡೆ, ಉತ್ತರಪ್ರದೇಶದಿಂದ ಆರ್ಥಿಕ ಸಚಿವ ಅರುಣ್ ಜೇಟ್ಲಿ ವಿಜಯ ಸಾಧಿಸಿದ್ದಾರೆ.
ಕರ್ನಾಟಕದಲ್ಲಿ ಜೆಡಿಎಸ್ ಏಜೆಂಟ್ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾರಣ ಮತ ಎಣಿಕೆ ಆರಂಭಗೊಂಡಿಲ್ಲ. ಉತ್ತರಪ್ರದೇಶದಲ್ಲಿ ಕೂಡ ಬ್ಯಾಲೆಟ್ ಪತ್ರಗಳಿಗೆ ಸಂಬಂಧಿಸಿದಂತೆ ದೂರು ಬಂದ ಹಿನ್ನಲೆಯಲ್ಲಿ ಮತ ಎಣಿಕೆಗೆ ಅಧಿಕಾರಿಗಳು ಅನುಮತಿ ನೀಡಿಲ್ಲ. ಒಟ್ಟು 16 ರಾಜ್ಯಗಳಿಂದ 58 ಸ್ಥಾನಗಳಿಗೆ ಮತದಾನ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.