ಬೆಂಗಳೂರು ಲೈಂಗಿಕ ದೌರ್ಜನ್ಯ: ರಾಜ್ಯ ಸರ್ಕಾರದ ಹೆಸರು ಹಾಳು ಮಾಡಲು ಬಿಜೆಪಿ ಷಡ್ಯಂತ್ರ!

Published : Jan 04, 2017, 04:37 PM ISTUpdated : Apr 11, 2018, 01:08 PM IST
ಬೆಂಗಳೂರು ಲೈಂಗಿಕ ದೌರ್ಜನ್ಯ: ರಾಜ್ಯ ಸರ್ಕಾರದ ಹೆಸರು ಹಾಳು ಮಾಡಲು ಬಿಜೆಪಿ ಷಡ್ಯಂತ್ರ!

ಸಾರಾಂಶ

ಕಳೆದ ಬಾರಿ ರಾಜ್ಯದಲ್ಲಿ ಜಿಮ್ ಸಮಾವೇಶ ನಡೆಯುತ್ತಿದ್ದ ಸಂದರ್ಭದಲ್ಲಿ ತಾಂಜಾನಿಯಾ ಯುವತಿಯ ಪ್ರಕರಣವನ್ನು ಬಿಜೆಪಿ ಎತ್ತಿಕಟ್ಟಿ, ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಎಂದು ಹೇಳಿತ್ತು. ಬಳಿಕ ತಾಂಜಾನಿಯಾ ರಾಯಭಾರಿ ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿತ್ತು, ಎಂದು ಬೃಜೇಶ್ ಕಾಳಪ್ಪ ಹೇಳಿದ್ದಾರೆ.

ಬೆಂಗಳೂರು (ಜ,04): ಬೆಂಗಳೂರು ಲೈಂಗಿಕ ದೌರ್ಜನ್ಯ ಕುರಿತು ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸುತ್ತಿರುವಾಗ, ಕಾಂಗ್ರೆಸ್ ಮುಖಂಡ ಬೃಜೇಶ್ ಕಾಳಪ್ಪ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಹೆಸರು ಹಾಳು ಮಾಡಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಪ್ರಕರಣದ ಕುರಿತು ಬ್ರಿಜೇಶ್ ಕಾಳಪ್ಪ ಅಸಂಬದ್ಧ ಹೇಳಿಕೆ ನೀಡಿದ್ದಾರೆ.

ಕಳೆದ ಬಾರಿ ರಾಜ್ಯದಲ್ಲಿ ಜಿಮ್ ಸಮಾವೇಶ ನಡೆಯುತ್ತಿದ್ದ ಸಂದರ್ಭದಲ್ಲಿ ತಾಂಜಾನಿಯಾ ಯುವತಿಯ ಪ್ರಕರಣವನ್ನು ಬಿಜೆಪಿ ಎತ್ತಿಕಟ್ಟಿ, ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಎಂದು ಹೇಳಿತ್ತು. ಬಳಿಕ ತಾಂಜಾನಿಯಾ ರಾಯಭಾರಿ ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿತ್ತು, ಎಂದು ಬೃಜೇಶ್ ಕಾಳಪ್ಪ ಹೇಳಿದ್ದಾರೆ.

ಕೆಲ ದಿನಗಳಲ್ಲೇ ಕರ್ನಾಟಕದಲ್ಲಿ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮ ನಡೆಯಲಿದೆ, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿ ಹುನ್ನಾರ ನಡೆಸಿದೆ, ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್’ನ ಹೆಸರು ಹಾಳು ಮಾಡುವುದರ ಜೊತೆ ಬೆಂಗಳೂರಿಗೂ ಬಿಜೆಪಿಯಿಂದ ಅವಮಾನವಾಗುತ್ತಿದೆ ಎಂದು ಫೇಸ್’ಬುಕ್ ನಲ್ಲಿ ಬೃಜೇಶ್ ಕಾಳಪ್ಪ ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!