ಕೋರ್ ಕಮೀಟಿ ಸಭೆಗೆ ಬಾರದ ಅಶೋಕ, ಒಳಗೆ ಏನೇನು ಚರ್ಚೆಯಾಯ್ತು?

Published : Sep 06, 2019, 09:22 PM ISTUpdated : Sep 06, 2019, 09:24 PM IST
ಕೋರ್ ಕಮೀಟಿ ಸಭೆಗೆ ಬಾರದ ಅಶೋಕ, ಒಳಗೆ ಏನೇನು ಚರ್ಚೆಯಾಯ್ತು?

ಸಾರಾಂಶ

ಬಿಜೆಪಿ ಕೋರ್‌ ಕಮಿಟಿ ಸಭೆ/ ಆರ್ ಅಶೋಕ್ ಗೈರು/ ನಿಗಮ ಮಂಡಳಿ ನೇಮ ವಿಚಾರ ಚರ್ಚೆ/ ನಿಗಮ ಮಂಡಳಿ ಕಾರ್ಯಕರ್ತರಿಗೆ ಮೀಸಲಿಡುವ ತೀರ್ಮಾನ? 

ಬೆಂಗಳೂರು[ಸೆ. 06]  ಬಿಜೆಪಿ ಕೋರ್ ಕಮಿಟಿ ಸಭೆಯಿಂದ ಸಚಿವ ಆರ್. ಅಶೋಕ್ ದೂರ ಉಳಿದಿದ್ದಾರೆ. ಅಶೋಕ್ ಹೊರತುಪಡಿಸಿ ಉಳಿದ ಎಲ್ಲಾ ಕೋರ್ ಕಮಿಟಿ ಸದಸ್ಯರು ಸಭೆಗೆ ಹಾಜರಾಗಿದ್ದರು. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಗುರುವಾರ ಅಶೋಕ್ ನಿವಾಸಕ್ಕೆ  ತೆರಳಿದ್ದರು.  ಗುರುವಾರ ನಡೆದಿದ್ದ ಬೆಂಗಳೂರು ಮಹಾನಗರ ಕೋರ್ ಕಮಿಟಿ ಸಭೆಯಲ್ಲಿ  ಅಶೋಕ್ ಭಾಗವಹಿಸಿದ್ದರು. ಆದರೆ ಇಂದು ನಡೆದ ರಾಜ್ಯ ಕೋರ್ ಕಮಿಟಿ ಸಭೆಗೆ ಕಂದಾಯ ಸಚಿವರು ಗೈರಾಗಿದ್ದಾರೆ.

ಗಣೇಶೋತ್ಸವಕ್ಕೆ ಗಣಪತಿ ಕೂರಿಸಲು ಬಾಂಡ್ ಪಡೆಯುವ ಸರ್ಕಾರದ ಕ್ರಮಕ್ಕೆ ಕೋರ್ ಕಮಿಟಿ ಸಭೆಯಲ್ಲೇ ವಿರೋಧ ವ್ಯಕ್ತವಾಯಿತು. ಸರ್ಕಾರದ ಕ್ರಮಕ್ಕೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀವ್ರ ಬೇಸರ. ನಮ್ಮದೇ ಸರ್ಕಾರ ಇರುವಾಗ ಈ ಕ್ರಮ ಎಷ್ಟು ಸರಿ ಎಂದ ಕೋರ್ ಕಮಿಟಿ ಸದಸ್ಯರು ಪ್ರಶ್ನೆ ಮಾಡಿದರು.

ರಾಜಕೀಯ ಪ್ರಾಬಲ್ಯ ಸಾಧಿಸಲು ಸಚಿವ ಆರ್. ಅಶೋಕ್ ಸರ್ಕಸ್

ಹಿಂದಿನ ಸರ್ಕಾರ ಮಾಡಿದ ತೀರ್ಮಾನವನ್ನು ನಮ್ಮ ಸರ್ಕಾರದಲ್ಲಿ ಯಾಕೆ ಮುಂದುವರಿಯಬೇಕು..? ಗಣೇಶೋತ್ಸವಕ್ಕೆ ಬಾಂಡ್ ಪಡೆಯುವುದು ಎಷ್ಟು ಸರಿ?  ನಮ್ಮವರೇನು ಗಲಾಟೆ ಮಾಡ್ತಾರಾ? ಈ ಕ್ರಮ ಸರಿಯಲ್ಲ. ತಕ್ಷಣ ಈ ಬಗ್ಗೆ ಗೃಹ ಸಚಿವರಿಗೆ ಮಾತನಾಡಿ ಕ್ರಮವಹಿಸಲು ಸೂಚಿಸಬೇಕು ಎಂದು ಕೇಳಿಕೊಳ್ಳಲಾಯಿತು. ಈ ಚರ್ಚೆ ನಡೆಯುತ್ತಿದ್ದಾಗಲೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆಯಿಂದ ನಿರ್ಗಮಿಸಿದರು.

ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಅವಕಾಶ ಸಿಗಬೇಕು. ಪರಸ್ಪರ ಚರ್ಚೆಯ ಮೂಲಕವೇ ನೇಮಕಾತಿ ಮಡುವುದುದು ಸೂಕ್ತ  ಎಂಬ ಅಭಿಪ್ರಾಯವೂ ಕೇಳಿಬಂದಿತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ