‘ಮಂಗಳೂರು ಚಲೋ’ಗೆ ಸಿಕ್ಕಿಲ್ಲ ಅನುಮತಿ: ಅನುಮತಿ ಸಿಗದಿದ್ದರು ರ್ಯಾಲಿ ನಡೆಸಲಿದೆ ಬಿಜೆಪಿ!

Published : Sep 05, 2017, 08:42 AM ISTUpdated : Apr 11, 2018, 01:13 PM IST
‘ಮಂಗಳೂರು ಚಲೋ’ಗೆ ಸಿಕ್ಕಿಲ್ಲ ಅನುಮತಿ: ಅನುಮತಿ ಸಿಗದಿದ್ದರು ರ್ಯಾಲಿ ನಡೆಸಲಿದೆ ಬಿಜೆಪಿ!

ಸಾರಾಂಶ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಇನ್ನೂ ಡೋಲಾಯಮಾನ ಸ್ಥಿತಿಯಲ್ಲಿದೆ. ಬೈಕ್​ ರ್ಯಾಲಿಯನ್ನು ಶತಾಯಗತಾಯ ಹತ್ತಿಕ್ಕಲೇಬೇಕೆಂಬ ಹಠಕ್ಕೆ ರಾಜ್ಯ ಸರ್ಕಾರ ಬಿದ್ದಿದ್ದರೆ, ರ್ಯಾಲಿ ನಡೆಸಿಯೇ ತೀರಲು ಬಿಜೆಪಿ ಜಿದ್ದಿಗೆ ಬಿದ್ದಿದೆ.

ಬೆಂಗಳೂರು(ಸೆ.05): ಸೆಪ್ಟೆಂಬರ್ 7ರಂದು ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಯೋಜನೆಗೊಂಡಿರುವ ಸಮಾವೇಶಕ್ಕೆ ಪೂರ್ವಭಾವಿಯಾಗಿ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್​ ರ್ಯಾಲಿ ಏನಾಗಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಹಾಗೂ ಮಂಗಳೂರು ಪೊಲೀಸ್​ ಆಯುಕ್ತರು ಈಗಾಗಲೇ ಬೈಕ್​ ರ್ಯಾಲಿಗೆ ಅನುಮತಿ ನೀಡಿಲ್ಲ. ಇತ್ತ ಬೆಂಗಳೂರು ಪೊಲೀಸ್ ಕಮಿಷನರ್ ಕೂಡ ಅನುಮತಿಗೆ ನಿರಾಕರಿಸಿದ್ದು, ಕಾನೂನು ಉಲ್ಲಂಘಿಸಿದಸರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿಲ್ಲ. ಆದರೂ ಇಂದು ಬೆಳಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್'​ನಿಂದ ಱಲಿ ಆರಂಭಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇನ್ನೊಂದೆಡೆ ರ್ಯಾಲಿಗೆ ತೆರಳುವ ಮಾರ್ಗ ಮಧ್ಯೆ ಊಟೋಪಹಾರಕ್ಕೆ ನಿಗದಿಪಡಿಸಿದ ಸ್ಥಳದಲ್ಲಿ ಪೊಲೀಸರು ಬ್ಯಾರಿಕೇಡ್'​ಗಳನ್ನು ಅಳವಡಿಸಿ ಅಡ್ಡಿಪಡಿಸಿರುವುದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಿಂದ ಹೊರಡುವ ರ್ಯಾಲಿ ಹಾಸನ, ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ತಲುಪುವ ಯೋಜನೆ ಹಾಕಿಕೊಂಡಿದೆ. ಆದ್ರೆ ಪೊಲೀಸರಿಂದ ತಡೆ ವ್ಯಕ್ತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗದ ಚಿಂತನೆಯಲ್ಲೂ  ಬಿಜೆಪಿ ನಾಯಕರಿದ್ದಾರೆ. ಒಟ್ನಲ್ಲಿ ರ್‍ಯಾಲಿ ನಡೆಸಿಯೇ ತೀರುತ್ತೇವೆ ಎಂದು ಬಿಜೆಪಿ ಪಣತೊಟ್ಟರೆ, ಇತ್ತ ರ್ಯಾಲಿ ತಡೆಗೆ ಸರ್ಕಾರ ಎಲ್ಲಾ ರೀತಿಯಲ್ಲೂ ಸಜ್ಜಾಗಿದ್ದು, ಏನಾಗಬಹುದು ಎಂಬ ಕುತೂಹಲ ಹುಟ್ಟಿಕೊಂಡಿದೆ.

ವರದಿ: ಕಿರಣ್​ ಹನಿಯಡ್ಕ, ಸುವರ್ಣ ನ್ಯೂಸ್​.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಿಯಾಂಕ ಗಾಂಧಿ ಮಗನ ನಿಶ್ಚಿತಾರ್ಥದಿಂದ ಕ್ಯಾನ್ಸಲ್ ಆಗಿದ್ದ ಟ್ರಿಪ್, ಮತ್ತೆ ವಿದೇಶಕ್ಕೆ ಹಾರಿದ ರಾಹುಲ್‌ ಗಾಂಧಿ!
ದೇಶದ ಅತಿದೊಡ್ಡ QSR ಪ್ಲ್ಯಾನ್‌ ಪ್ರಕಟ, ಪಿಜಾ ಹಟ್‌ ಜೊತೆ ವಿಲೀನವಾಗಲಿದೆ ಕೆಎಫ್‌ಸಿ ರೆಸ್ಟೋರೆಂಟ್‌!