
ಬೆಂಗಳೂರು (ಸೆ.16): ರಾಜ್ಯ ಬಿಜೆಪಿ ನಾಯಕರ ಹೋರಾಟ ಅಮಿತ್ ಶಾರನ್ನು ಮೆಚ್ಚಿಸಲೇ ಹೊರತು ಯಾವುದೇ ಸೈದ್ಧಾಂತಿಕ ನಿಲುವು ಅವರಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮಮಂದಿರ, ಹಿಂದೂ ರಾಷ್ಟ್ರ ನಿರ್ಮಾಣದ ವಿಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದರೆ ಅದನ್ನು ಸೈದ್ಧಾಂತಿಕ ನಿಲುವು ಎನ್ನಲಾಗದು. ನೀವು ಎಷ್ಟು ಸಲ ಜೈಲಿಗೆ ಹೋಗಿದ್ದೀರಿ? ಎಷ್ಟು ಕೇಸುಗಳು ನಿಮ್ಮ ಮೇಲೆ ಬಿದ್ದಿವೆ? ಎಷ್ಟು ಲಾಠಿ ಏಟು ತಿಂದಿದ್ದೀರಾ? ಎಂದು ಅಮಿತ್ ಶಾ ರಾಜ್ಯದ ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ ಅಂತ ಮಾಧ್ಯಮಗಳಲ್ಲಿ ವರದಿಯಾಗಿದೆ.ಪಕ್ಷದ ಅಧ್ಯಕ್ಷ ಪ್ರಶ್ನೆ ಮಾಡುವ ರೀತಿಯೇ ಇದು? ಅಮಿತ್ ಶಾ ಮೆಚ್ಚಿಸಲಿಕ್ಕೆ ಬಿಜೆಪಿ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮೌಡ್ಯ ನಿಷೇಧ ಕಾಯ್ದೆ ಜಾರಿ ಬಗ್ಗೆ ಮಾತನಾಡುತ್ತಾ, ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು. ನವೆಂಬರ್’ನಲ್ಲಿ ನಡೆಯುವ ಅಧಿವೇಶನದಲ್ಲಿ ವಿಧೇಯಕ ಮಂಡಿಸುವ ಬಗ್ಗೆ ಚಿಂತನೆ ನಡೆದಿದೆ. ಟಿವಿಗಳಲ್ಲಿ ಜ್ಯೋತಿಷ್ಯ ತೋರಿಸಬೇಡಿ ಎನ್ನಲಾಗದು. ಜನರಿಗೆ ನಂಬಬೇಡಿ, ಪಾಲನೆ ಮಾಡಬೇಡಿ ಎಂದಷ್ಟೇ ನಾವು ಹೇಳಬಹುದು ಎಂದು ಸಿಎಮ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.